ಚಿಂತಾಮಣಿ ವಿಷ ಪ್ರಸಾದ ಸೇವನೆ ಪ್ರಕರಣ ಎಲ್ಲಿಗೆ ಬಂತು?

Webdunia
ಶುಕ್ರವಾರ, 17 ಮೇ 2019 (13:00 IST)
ಇಡೀ ರಾಜ್ಯವನ್ನು ಬೆಚ್ಚಿಬೀಳಿಸುವಂತೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಪೊಲೀಸರು.  
ಚಿಂತಾಮಣಿ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ ಆರೋಪ ಸಾಬೀತುಪಡಿಸಿದ್ದಾರೆ ಚಿಂತಾಮಣಿ ನಗರ ಪೊಲೀಸರು.
ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ ಚಿಂತಾಮಣಿ ಡಿವೈಎಸ್ಪಿ ಶ್ರೀನಿವಾಸ್.  

ಗಂಗಮ್ಮ ದೇವಿ ದೇವಸ್ಥಾನದಲ್ಲಿ ವಿಷ ಪ್ರಸಾದ ಹಂಚಿಕೆ ಹಿನ್ನೆಲೆಯಲ್ಲಿ ದುರ್ಘಟನೆ ನಡೆದಿತ್ತು. ಚಿಂತಾಮಣಿ ನಗರದ ನಾರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಸ್ಥಾನದಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರನ್ನು ಬಲಿ ಪಡೆದಿತ್ತು ವಿಷ ಪ್ರಸಾದ. ಎಂಟು ಜನ ಭಕ್ತಾಧಿಗಳು ಅಸ್ವಸ್ಥರಾಗಿದ್ದರು.

ಜನವರಿ ಇಪ್ಪತೈದರಂದು ದೇವಸ್ಥಾನದಲ್ಲಿ ವಿಷ ಪ್ರಸಾದ ಹಂಚಿಕೆಯಾಗಿತ್ತು. ಅಕ್ರಮ ಸಂಭಂದದ ಹಿನ್ನೆಲೆಯಲ್ಲಿ ವಿಷ ಬೆರೆಸಿರುವುದಾಗಿ ದೂರು ದಾಖಲಾಗಿತ್ತು. ಪೊಲೀಸರಿಗೆ ಸಮಗ್ರ ತನಿಖೆಗೆ ಆದೇಶಿಸಿತ್ತು ನ್ಯಾಯಾಲಯ. ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮೀ, ಲೋಕೇಶ್, ಪಾರ್ವತಮ್ಮ , ಅಮರಾವತಿ ವಿರುದ್ಧ ದೋಷಾರೋಪ ಸಲ್ಲಿಸಿದ್ದಾರೆ ಪೊಲೀಸರು.
ಲಕ್ಷ್ಮಿ ಮತ್ತು ಲೋಕೇಶ ನಡುವಿನ ಅಕ್ರಮ ಸಂಭಂದವೇ ಪ್ರಕರಣದ ಪ್ರಮುಖ ಕಾರಣ ಎಂದು ಪೊಲೀಸ್ ವಿಚಾರಣೆಯಲ್ಲಿ ಅಂತಿಮ ಗೊಂಡಿದೆ ಎನ್ನಲಾಗಿದೆ.

ಇನ್ನುಳಿದ ಮೂವರು ಆರೋಪಿಗಳು ಈ ಕೃತ್ಯಕ್ಕೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಕಂಬಿ ಎಣಿಸಬೇಕಾಗಿದೆ . ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿದೆ ಗಂಗಮ್ಮ ದೇವಸ್ಥಾನ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments