Webdunia - Bharat's app for daily news and videos

Install App

ಪುತ್ರಿ ವಿವಾಹಕ್ಕೆ ಜನಾರ್ದನ ರೆಡ್ಡಿಗೆ ಹಣ ಎಲ್ಲಿಂದ ಬಂತು? ಕಪ್ಪು ಹಣವಾ?: ಟಪಾಲ್ ಗಣೇಶ್

Webdunia
ಗುರುವಾರ, 20 ಅಕ್ಟೋಬರ್ 2016 (14:10 IST)
ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಪುತ್ರಿ ವಿವಾಹವನ್ನು ಅದ್ದೂರಿಯಾಗಿ ಮಾಡುತ್ತಿರುವುದು ಅಭಿನಂದನೀಯ. ಆದರೆ, ಇದಕ್ಕೆ ವೆಚ್ಚ ಮಾಡುತ್ತಿರುವ ಹಣ ಎಲ್ಲಿಯದು ಎನ್ನುವುದರ ಕುರಿತು ತನಿಖೆಯಾಗಬೇಕು ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಆಗ್ರಹಿಸಿದ್ದಾರೆ. 
 
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧನ ಮಾಡಿದಾಗ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅವರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದರು. ಹಾಗಾದರೇ ಈಗ ಪುತ್ರಿಯ ವಿವಾಹಕ್ಕೆ ವೆಚ್ಚ ಮಾಡುತ್ತಿರುವ ಹಣ ಎಲ್ಲಿಂದ ಬಂದಿದೆ. ಇದು ಕಪ್ಪು ಹಣವಾ ಎಂದು ಪ್ರಶ್ನಿಸಿದರು. 
 
ದೇಶದಲ್ಲಿನ ಆದಾಯ ತೆರಿಗೆ ವಂಚಕರಿಗೆಲ್ಲ ಕಪ್ಪು ಹಣ ಪ್ರಕಟಿಸುವಂತೆ ಹೇಳಿರುವ ಕೇಂದ್ರ ಸರಕಾರ, ರೆಡ್ಡಿ ಈಗ ವೆಚ್ಚ ಮಾಡುತ್ತಿರುವ ಕೋಟ್ಯಾಂತರ ರೂಪಾಯಿ ಹಣ ಎಲ್ಲಿಂದ ಬಂದಿದೆ ಎನ್ನುವದರ ಕುರಿತು ತನಿಖೆ ನಡೆಸಲಿ ಎಂದರು. 
 
ಜನಾರ್ದನ ರೆಡ್ಡಿ ಬಳ್ಳಾರಿಗೆ ಬರುತ್ತಿದ್ದಾನೆ. ರೆಡ್ಡಿಯನ್ನು ವಿರೋಧ ಹಾಕಿಕೊಂಡಿರುವ ನೀನು ಬದುಕುವುದು ಕಷ್ಟ ಎಂದು ಕೆಲವರು ಹೇಳುತ್ತಿದ್ದಾರೆ. ಇಂತಹ ಧಮ್ಕಿಗಳಿಗೆ ನಾನು ಹೆದರುವುದಿಲ್ಲ, ಒಂದು ವೇಳೆ, ನಾನು ಸತ್ತರೆ ರೆಡ್ಡಿಯಿಂದಲೇ ಎಂದು ಈಗಾಗಲೇ ಹೇಳಿದ್ದೇನೆ. ಅಕ್ರಮ ಗಣಿಗಾರಿಕೆಯಲ್ಲಿ ಅವರನ್ನು ಜೈಲಿಗೆ ಕಳುಹಿಸಿದ ತೃಪ್ತಿ ನನಗಿದೆ ಎಂದು ಟಪಾಲ್ ಗಣೇಶ್ ಹೇಳಿದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments