1 ಕೆಜಿ ಚಿನ್ನಾಭರಣ ವಶವಾಗಿದ್ದು ಎಲ್ಲಿ?

Webdunia
ಬುಧವಾರ, 27 ಫೆಬ್ರವರಿ 2019 (14:08 IST)
ಕುಖ್ಯಾತ ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 1 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ರೈಲುಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸುತ್ತ ಸಹ ಪ್ರಯಾಣಿಕರ ಲಗೇಜ್, ಬ್ಯಾಗ್ಗಳನ್ನು ಇಳಿಸುವ ನೆಪ ಮಾಡಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಕಳ್ಳರ ಗ್ಯಾಂಗ್ನ್ನು ಬಂಧಿಸಿರುವ ರೈಲ್ವೆ ಪೊಲೀಸರು 1 ಕೆಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ದೆಹಲಿಯ ಸುಲ್ತಾನ್ ಪ್ರಿಯಾ, ರಣವೀರ್ ಸಿಂಗ್ (43), ಸತ್ಬೀರ್ (46), ವಿನೋದ್ (31), ಲಲಿತ್ ಕುಮಾರ್ (27) ಹಾಗೂ ಹರಿಯಾಣದ ಇಸ್ಸಾರದ ಶುಭಾಷ್ (44) ಬಂಧಿತ ಕಳ್ಳರಾಗಿದ್ದಾರೆ.
ಬಂಧಿತರಿಂದ 28 ಲಕ್ಷ ಮೌಲ್ಯದ 1 ಕೆಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ರೈಲ್ವೆ ಎಸ್ಪಿ ಭೀಮಾಶಂಕರ್ ಗುಳೇದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗ್ಯಾಂಗ್ ಕಟ್ಟಿಕೊಂಡು ದೆಹಲಿಯಿಂದ ಬಂದು ರಾಜ್ಯದ ವಿವಿಧೆಡೆ ರೈಲುಗಳಲ್ಲಿ ಪ್ರಯಾಣಿಕರಂತೆ ಸಂಚರಿಸುತ್ತಿದ್ದರು. ಶ್ರೀಮಂತ ಪ್ರಯಾಣಿಕರನ್ನು ಗುರುತಿಸಿ ಅವರ ಲಗೇಜ್, ಬ್ಯಾಗ್ಗಳನ್ನು ಇಳಿಸುವ ವೇಳೆ ಸಹಾಯ ಮಾಡುವ ನೆಪಮಾಡಿ ಬ್ಯಾಗ್ಗಳಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments