Select Your Language

Notifications

webdunia
webdunia
webdunia
webdunia

‘ಎಲ್ಲಿದ್ದೀಯಪ್ಪಾ ಕುಮಾರಸ್ವಾಮಿ?’

‘ಎಲ್ಲಿದ್ದೀಯಪ್ಪಾ ಕುಮಾರಸ್ವಾಮಿ
ಸರ್ಕಾರ ಜನರ ಪರ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್​​​​ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಎಲ್ಲಿದ್ಯಪ್ಪ ಕುಮಾರಸ್ವಾಮಿ..? ಎಂದು ಲೇವಡಿ ಮಾಡಿದರು. ಅಧಿವೇಶನ ಇದ್ದಾಗಲೇ ಕುಮಾರಸ್ವಾಮಿ ಸದನಕ್ಕೆ ಬರೋದಿಲ್ಲ. ಆಮೇಲೆ ಎಲ್ಲಿದ್ಯಪ್ಪ ಕುಮಾರಸ್ವಾಮಿ ಅಂತ ಹುಡುಕಬೇಕು. ಸದನ ಕರೆಯಿರಿ ಅನ್ನೋದು, ಆಮೇಲೆ ಬರದೆ ಇರೋದು. ಸಿದ್ದರಾಮಯ್ಯ ಮಾತಿನಂತೆ ಬಾಯಿಗೆ ಬಂದಂತೆ ದಿಕ್ಕು ಇಲ್ಲದಂತೆ ಗುಂಡು ಹೊಡೆಯುತ್ತಿದ್ದಾರೆ ಎಂದರು. ರಾಮನಗರ ಜಿಲ್ಲೆಯಲ್ಲಿ ನಾವು ಚೆನ್ನಾಗಿ ಕೆಲಸ ಮಾಡ್ತಿದ್ದೇವೆ ಎಂದ ಸಚಿವರು, ನಮ್ಮ ಪಕ್ಷ ನಮ್ಮ ಸರ್ಕಾರ ಜನ ಪರವಾಗಿರುವ ಸರ್ಕಾರ. ಇದು ಯಾವುದೋ, ಕಾಂಗ್ರೆಸ್, ಜೆಡಿಎಸ್ ನಂತೆ ಪ್ರೈವೆಟ್​ ಕಂಪನಿ ತರ ಅಲ್ಲ. ನಮ್ಮಲ್ಲಿ ಯಾರು ಏನು ಬೇಕಾದರೂ ಆಗಬಹುದು. ಆದರೆ ಅಲ್ಲಿ ಕುಟುಂಬಕ್ಕಷ್ಟೇ ಅಧಿಕಾರ. ಸೋನಿಯಾ ಗಾಂಧಿ ಕಂಪನಿ, ರಾಹುಲ್ ಗಾಂಧಿ ಕಂಪನಿ, ಪ್ರಿಯಾಂಕಾ ಗಾಂಧಿ ಕಂಪನಿ. ರಾಮನಗರದಲ್ಲಿ ಕುಮಾರಸ್ವಾಮಿದು ಒಂದು ಕಂಪನಿ. ಈ ಸಮಾಜದಲ್ಲಿ ಯಾವುದಾದರೂ ಅರ್ಥ ಇಲ್ಲದೆ ಇರೋ ಪಕ್ಷಗಳು ಅಂದರೆ ಇವುಗಳೇ. ಬರುವ ಚುನಾವಣೆಯಲ್ಲಿ ರಾಮನಗರದಲ್ಲಿ ನಾವು ಮೆಜಾರಿಟಿನೇ ತೆಗೆದುಕೊಳ್ತೇವೆ. ಅಲ್ಲಿ ಎಲ್ಲ ತರ ಇದ್ದಾರೆ, ಬಂಡೆ ಜೊತೆ ಕುಮಾರಸ್ವಾಮಿನೂ ಇದ್ದಾರೆ ಎಂದು ವ್ಯಂಗ್ಯವಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಟೊಮೊಟೊವನ್ನ ಚರಂಡಿಗೆ ಎಸೆದ ರೈತರು..!