Webdunia - Bharat's app for daily news and videos

Install App

ಕಾವೇರಿ ಹೋರಾಟದಲ್ಲಿ ಪ್ರತಾಪ ತೋರದ ಪ್ರತಾಪ ಸಿಂಹ: ಎಚ್.ವಿಶ್ವನಾಥ್

Webdunia
ಬುಧವಾರ, 21 ಸೆಪ್ಟಂಬರ್ 2016 (16:43 IST)
ಮಂಡ್ಯ ಮೈಸೂರು ಜಿಲ್ಲೆಗಳ ಜನತೆ ಕಾವೇರಿ ನೀರು ಹಂಚಿಕೆ ಕುರಿತಂತೆ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕಾಶ್ಮಿರ ಕಣಿವೆಯ ಸಂಸದ ಪ್ರತಾಪ್ ಸಿಂಹ್ ಮಾತ್ರ ಪ್ರತಾಪವನ್ನು ತೋರದೆ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ಸಂಸದ ಪ್ರತಾಪ್ ಸಿಂಗ್ ಕಾವೇರಿ ನೀರು ಹಂಚಿಕೆ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಬಿಟ್ಟು ಯಾವುದೇ ಪತ್ರಿಕೆಗಳಿಗೆ ಅಂಕಣ, ಲೇಖನಗಳನ್ನು ಬರೆಯುತ್ತಿದ್ದಾರೋ ಎಂದು ಲೇವಡಿ ಮಾಡಿದರು.
 
ಕಾವೇರಿ ಕಣಿವೆಯ ಸಂಸದರು ರಾಜೀನಾಮೆ ನೀಡಿ ಹೋರಾಟದಲ್ಲಿ ಪಾಲ್ಗೊಂಡು ರಾಜ್ಯದ ಜನತೆಗೆ ನ್ಯಾಯ ಒದಗಿಸಿಕೊಡಲು ಪ್ರಯತ್ನಿಸಬೇಕು. ಇಲ್ಲವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.
 
ಕಾವೇರಿ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಯವರನ್ನು ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮೋದಿ ಕಾವೇರಿ ಬಗ್ಗೆ ಮೌನವೃತ ತಾಳಿದ್ದಾರೆ. ಕಾವೇರಿ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಯವರನ್ನು ಕೇಳುವುದನ್ನು ಬಿಟ್ಟು ಉಗಾಂಡಾದ ಅಧ್ಯಕ್ಷಕರನ್ನು ಕೇಳಲು ಸಾಧ್ಯವೇ? ಎಂದು ತಿರುಗೇಟು ನೀಡಿದರು. 
 
ಬಿಜೆಪಿ ಸರ್ವಪಕ್ಷ ಸಭೆಗೆ ಗೈರುಹಾಜರಾಗುವುದಾಗಿ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, ರಾಜ್ಯದ ವಿಚಾರ ಬಂದಾಗ, ರಾಷ್ಟ್ರೀಯ ಪಕ್ಷವಾದ ಬಿಜೆಪಿ ನಿಲವು ಸರಿಯಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಹೇಳಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments