Webdunia - Bharat's app for daily news and videos

Install App

ವೈಭವದ ದಸರಾ ದರ್ಬಾರ್ ನಡೆದದ್ದೆಲ್ಲಿ?

Webdunia
ಬುಧವಾರ, 31 ಜುಲೈ 2019 (16:02 IST)
ಭೀಮನ ಅಮಾವಾಸ್ಯೆಯ ಅಂಗವಾಗಿ ತಾಯಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಬಾರ್ ಮೆರವಣಿಗೆ ಸಡಗರದಿಂದ ನೆರವೇರಿದೆ.

ಮಂಡ್ಯ ಜಿಲ್ಲೆ ಕೊರಟಿಕೆರೆ ಗ್ರಾಮದಲ್ಲಿ 4 ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ತಾಯಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಬಾರ್ ಮೆರವಣಿಗೆ ನಡೆದಿದೆ.  

ಮಂಡ್ಯದ ಕೃಷ್ಣರಾಜಪೇಟೆ ತಾಲ್ಲೂಕಿನ ಕೊರಟಿಕೆರೆ ಗ್ರಾಮದಲ್ಲಿ 4ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ಸಪ್ತಮಾತ್ರಿಕಾ ಹೋಮ, ತಾಯಿ ರಾಮಲಿಂಗ ಚೌಡೇಶ್ವರಿ ಅಮ್ಮನವರ ಆನೆಯ ಅಂಬಾರಿಯ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಮಠದಿಂದ ಆಗಮಿಸಿದ್ದ ಆನೆಯು ತಾಯಿಯ ಉತ್ಸವ ಮೂರ್ತಿಯನ್ನು ಗ್ರಾಮದಲ್ಲಿ ಪ್ರದಕ್ಷಿಣೆ ಹಾಕಿ ಭಕ್ತಿಯ ಪರಾಕಾಷ್ಠೆಯನ್ನು ಪ್ರದರ್ಶನ ಮಾಡಿತು.

ನಡೆಮುಡಿಯ ಮೇಲೆ ಬಾಲಕಿಯರು ಶ್ರೀ ಚಾಮುಂಡೇಶ್ವರಿ ದೇವಿಯ ಕರಗದ ಕಳಶಗಳನ್ನು ತಲೆಯ ಮೇಲೆ ಹೊತ್ತು ಮೆರವಣಿಗೆ ಮಾಡಿದರು. ಉಧ್ಯಮಿ ಬಿ.ರಾಜಶೇಖರ್ ದಂಪತಿ ಅಂಬಾರಿಯನ್ನು ಹೊತ್ತಿದ್ದ ಆನೆ ಗೌರಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದ್ರು.

ನಾಡಿನ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದರ್ಶನ ಪಡೆದು ಕೃತಾರ್ಥರಾದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments