Webdunia - Bharat's app for daily news and videos

Install App

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ ಶಾಲೆಗಳಿಗೆ ರಜೆ ನೀಡಬೇಕೇ?

Krishnaveni K
ಶುಕ್ರವಾರ, 19 ಜನವರಿ 2024 (10:51 IST)
ಬೆಂಗಳೂರು: ಜನವರಿ 22 ರಂದು ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರ ಲೋಕಾರ್ಪಣೆಯಾಗುತ್ತಿದೆ. ಈ ದಿನ ಶಾಲೆಗಳಿಗೆ ರಜೆ ಘೋಷಿಸಬೇಕೇ ಎಂಬ ಚರ್ಚೆ ಶುರುವಾಗಿದೆ.

ಉತ್ತರ ಪ್ರದೇಶ, ಛತ್ತೀಸ್ ಘಡ ಸೇರಿದಂತೆ ಕೆಲವು ಬಿಜೆಪಿ ಆಡಳಿತವಿರುವ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಈಗಾಗಲೇ ಈ ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಜನವರಿ 22 ರಂದು ಮದ್ಯ ಮಾರಾಟವನ್ನೂ ನಿಷೇಧಿಸಿ ಡ್ರೈ ಡೇ ಆಚರಿಸಲಾಗುತ್ತಿದೆ. ಇದೀಗ ರಾಜ್ಯಗಳಲ್ಲೂ ಶಾಲೆಗಳಿಗೆ ರಜೆ ಘೋಷಿಸಬೇಕೇ ಎಂಬ ಬಗ್ಗೆ ಚರ್ಚೆಗಳು ಶುರುವಾಗಿದೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿದ್ದಾರೆ. ಈ ದಿನ ಶಾಲೆಗಳಿಗೆ ರಜೆ ಬೇಡ. ಅದರ ಬದಲು ರಾಮಮಂದಿರ ಉದ್ಘಾಟನೆಯ ಲೈವ್ ನ್ನು ಶಾಲೆಗಳಲ್ಲಿಯೇ ತೋರಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಶಾಲೆಗಳು ಈಗ ವರ್ಷದ ಕೊನೆಯ ಹಂತದಲ್ಲಿದ್ದು, ಪಠ್ಯಕ್ರಮ ಮುಕ್ತಾಯಗೊಳಿಸುವ ಧಾವಂತದಲ್ಲಿವೆ. ಈ ಸಂದರ್ಭದಲ್ಲಿ ರಜೆ ನೀಡಿದರೆ ಮಕ್ಕಳ ಓದಿಗೆ ತೊಂದರೆಯಾಗಬಹುದು ಎಂಬುದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ರಾಮಮಂದಿರ ಉದ್ಘಾಟನೆಯನ್ನು ಮಕ್ಕಳು ಕಣ್ತುಂಬಿಕೊಳ್ಳಲು ಶಾಲೆಗಳಿಗೆ ರಜೆ ನೀಡಬೇಕೆಂದು ಆಗ್ರಹಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments