ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ ಶಾಲೆಗಳಿಗೆ ರಜೆ ನೀಡಬೇಕೇ?

Krishnaveni K
ಶುಕ್ರವಾರ, 19 ಜನವರಿ 2024 (10:51 IST)
ಬೆಂಗಳೂರು: ಜನವರಿ 22 ರಂದು ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರ ಲೋಕಾರ್ಪಣೆಯಾಗುತ್ತಿದೆ. ಈ ದಿನ ಶಾಲೆಗಳಿಗೆ ರಜೆ ಘೋಷಿಸಬೇಕೇ ಎಂಬ ಚರ್ಚೆ ಶುರುವಾಗಿದೆ.

ಉತ್ತರ ಪ್ರದೇಶ, ಛತ್ತೀಸ್ ಘಡ ಸೇರಿದಂತೆ ಕೆಲವು ಬಿಜೆಪಿ ಆಡಳಿತವಿರುವ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಈಗಾಗಲೇ ಈ ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಜನವರಿ 22 ರಂದು ಮದ್ಯ ಮಾರಾಟವನ್ನೂ ನಿಷೇಧಿಸಿ ಡ್ರೈ ಡೇ ಆಚರಿಸಲಾಗುತ್ತಿದೆ. ಇದೀಗ ರಾಜ್ಯಗಳಲ್ಲೂ ಶಾಲೆಗಳಿಗೆ ರಜೆ ಘೋಷಿಸಬೇಕೇ ಎಂಬ ಬಗ್ಗೆ ಚರ್ಚೆಗಳು ಶುರುವಾಗಿದೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿದ್ದಾರೆ. ಈ ದಿನ ಶಾಲೆಗಳಿಗೆ ರಜೆ ಬೇಡ. ಅದರ ಬದಲು ರಾಮಮಂದಿರ ಉದ್ಘಾಟನೆಯ ಲೈವ್ ನ್ನು ಶಾಲೆಗಳಲ್ಲಿಯೇ ತೋರಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಶಾಲೆಗಳು ಈಗ ವರ್ಷದ ಕೊನೆಯ ಹಂತದಲ್ಲಿದ್ದು, ಪಠ್ಯಕ್ರಮ ಮುಕ್ತಾಯಗೊಳಿಸುವ ಧಾವಂತದಲ್ಲಿವೆ. ಈ ಸಂದರ್ಭದಲ್ಲಿ ರಜೆ ನೀಡಿದರೆ ಮಕ್ಕಳ ಓದಿಗೆ ತೊಂದರೆಯಾಗಬಹುದು ಎಂಬುದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ರಾಮಮಂದಿರ ಉದ್ಘಾಟನೆಯನ್ನು ಮಕ್ಕಳು ಕಣ್ತುಂಬಿಕೊಳ್ಳಲು ಶಾಲೆಗಳಿಗೆ ರಜೆ ನೀಡಬೇಕೆಂದು ಆಗ್ರಹಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments