Webdunia - Bharat's app for daily news and videos

Install App

9 ವರ್ಷ ನಂತರ ಮೈಸೂರು ಮೃಗಾಲಯದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಬಿಳಿ ಹುಲಿ

Webdunia
ಗುರುವಾರ, 12 ಮೇ 2022 (14:20 IST)
ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ೯ ವರ್ಷಗಳ ನಂತರ ಹುಲಿ ಮೂರು ಮರಿಗಳಿಗೆ ಜನ್ಮ ನೀಡಿದೆ.
ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತಾರಾ ಎಂಬ ಹೆಣ್ಣು ಬಿಳಿ ಹುಲಿ ಮೂರು ಮರಿಗಳಿಗೆ ಜನ್ಮ ನೀಡಿದ್ದು, ಮೂರು ಮರಿಗಳು ಆರೋಗ್ಯವಾಗಿವೆ.
ತಾರಾ ಏ.26ರಂದು ಮೂರು ಮರಿಗಳಿಗೆ ಮೃಗಾಲಯದ ಹುಲಿ ಬೋನಿನಲ್ಲಿ ಜನ್ಮ ನೀಡಿದ್ದು, ಆರೈಕೆ ಮಾಡುತ್ತಿದೆ. ತಾಯಿ ಮತ್ತು ಮೂರು ಮರಿಗಳು ಆರೋಗ್ಯವಾಗಿವೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಸಹಜವಾಗಿ ಹಾಲುಣಿಸುವ ಮೂಲಕ ಆರೈಕೆ ಮಾಡುತ್ತಿದೆ. ಕಳೆದೆರಡು ವಾರಗಳಿಂದ ತಾಯಿ ಮತ್ತು ಮರಿಗಳ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಆರೈಕೆಯಲ್ಲಿ ತಾಯಿ ಹುಲಿಯಿಂದ ಸಹಜ ವರ್ತನೆ ದೃಢಪಟ್ಟ ಹಿನ್ನೆಲೆಯಲ್ಲಿ ಹುಲಿಮರಿಗಳ ಜನನವನ್ನು ಮೃಗಾಲಯ ದೃಢಪಡಿಸಿದೆ.
ಈ ಬಗ್ಗೆ ಮಾತನಾಡಿದ ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ 9 ವರ್ಷಗಳ ನಂತರ ಮೃಗಾಲಯದಲ್ಲಿ ಹುಲಿಮರಿಗಳ ಜನನವಾಗಿದೆ. ಹುಲಿಗಳ ಸಂರಕ್ಷಣೆ ಮತ್ತು ಹುಲಿಮರಿಗಳ ಜನನದಲ್ಲಿ ಮೈಸೂರು ಮೃಗಾಲಯ ಮುಂಚೂಣಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಹುಲಿಗಳ ಕೂಡುವಿಕೆಗೆ ಅವಕಾಶ ನೀಡಿರಲಿಲ್ಲ. ಇದರಿಂದ ಜನನ ಪ್ರಕ್ರಿಯೆ ನಡೆದಿರಲಿಲ್ಲ. ಆದರೆ ಇದೀಗ ಬೇರೆ ಬೇರೆ ಮೃಗಾಲಯಗಳಿಂದ ಹುಲಿಗಳ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ತಾರಾ ಹಾಗೂ ರಾಕಿಯನ್ನು ಒಟ್ಟಿಗೆ ಬಿಡಲಾಗಿತ್ತು. ಇದೀಗ ಮೂರು ಮರಿಗಳು ಜನಿಸಿವೆ.
ಪಾಲಕರು ಹಾಗೂ ವೈದ್ಯರು ತಾಯಿ ಹುಲಿ ಹಾಗೂ ಮರಿಗಳ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ. ಈ ಮರಿಗಳ ಜನನದಿಂದ ಮೈಸೂರು ಮೃಗಾಲಯ 9 ಗಂಡು ಹುಲಿ, 7 ಹೆಣ್ಣು ಹುಲಿ ಹಾಗೂ ಮೂರು ಹುಲಿಮರಿಗಳನ್ನು ಹೊಂದಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments