ಪಾಲಿಕೆ ಮುಖ್ಯ ಆಯುಕ್ತರಿಂದ ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ತಪಾಸಣೆ: ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು

Webdunia
ಶನಿವಾರ, 3 ಜುಲೈ 2021 (18:36 IST)
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯ ಸಂಜಯ್‌ನಗರದ 80 ಅಡಿ ರಸ್ತೆಯಲ್ಲಿ ಅಶ್ವಥ್ ನಗರದ ದ್ವಾರದಿಂದ ಎಂ.ಎಸ್ .ರಾಮಯ್ಯ ಆಸ್ಪತ್ತೆಯ ರಸ್ತೆಯ ಸ್ನಿಗಲ್ ವರೆಗೆ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. 
 
ಪಾಲಿಕೆಯ ಯೋಜನಾ ವಿಭಾಗದಿಂದ ಸಂಜಯ್‌ನಗರದ 80 ಅಡಿ ರಸ್ತೆಯು ಸುಮಾರು 1 ಕಿ.ಮೀ ಇದ್ದು, 9.82 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಮೇ ಅಂತ್ಯದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಂಡು 30 ದಿನಗಳಲ್ಲಿ ಎರಡೂ ಬದಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿರುತ್ತದೆ. ಈ ಪೈಕಿ ಒಂದು ಬದಿಯಲ್ಲಿ ಕ್ಯೂರಿಂಗ್ ಆಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಮತ್ತೊಂದು ಬದಿ ಕ್ಯೂರಿಂಗ್ ಬಾಕಿಯಿದೆ. ಅದಲ್ಲದೆ ರಸ್ತೆಯ ಎರಡೂ ಬದಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು, ನೀರಿನ ಪೈಪ್ ಲೈನ್, ಬೆಸ್ಕಾಂ, ಒಎಫ್‌ಸಿ ಕೇಬಲ್‌ಗಳಿಗೆ ಡಕ್ಟ್ಸ್ ಅಳವಡಿಕೆ, ಚರಂಡಿ ಕಾಮಗಾರಿ, ಪಾದಚಾರಿ ಮಾರ್ಗ ಸೇರಿದಂತೆ ಇನ್ನಿತರೆ ಸಿವಿಲ್ ಕಾಮಗಾರಿ ಬಾಕಿಯಿದ್ದು, 35 ರಿಂದ 40 ದಿನಗಳಲ್ಲಿ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 
 
ಈ ವೇಳೆ ಆಯುಕ್ತರು ಮಾತನಾಡಿ, ಕ್ಯೂರಿಂಗ್ ಆದ ಕೂಡಲೆ ಎರಡೂ ಕಡೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ, ಜೊತೆಗೆ ಬಾಕಿಯಿರುವ ಕಾಮಗಾರಿಯನ್ನು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

2026ರ ವರ್ಷಾ ಆರಂಭದಲ್ಲೇ ಮೈಲಿಗಲ್ಲು ಸೃಷ್ಟಿಸಿದ ಮುಂಬೈ, ಅಹಮದಾಬಾದ್ ಬುಲೆಟ್ ಟ್ರೈನ್

ಬಳ್ಳಾರಿ ಗಲಭೆ ವಿಚಾರ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಬೆಂಗಳೂರು, ಗರ್ಭಿಣಿ ಚಿರತೆ ಸಾವು, ತನಿಖೆಗೆ ಈಶ್ವರ್ ಬಿ ಖಂಡ್ರ ಆದೇಶ

ಮುಂದಿನ ಸುದ್ದಿ
Show comments