Webdunia - Bharat's app for daily news and videos

Install App

ಪಾಲಿಕೆ ಮುಖ್ಯ ಆಯುಕ್ತರಿಂದ ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ತಪಾಸಣೆ: ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು

Webdunia
ಶನಿವಾರ, 3 ಜುಲೈ 2021 (18:36 IST)
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯ ಸಂಜಯ್‌ನಗರದ 80 ಅಡಿ ರಸ್ತೆಯಲ್ಲಿ ಅಶ್ವಥ್ ನಗರದ ದ್ವಾರದಿಂದ ಎಂ.ಎಸ್ .ರಾಮಯ್ಯ ಆಸ್ಪತ್ತೆಯ ರಸ್ತೆಯ ಸ್ನಿಗಲ್ ವರೆಗೆ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. 
 
ಪಾಲಿಕೆಯ ಯೋಜನಾ ವಿಭಾಗದಿಂದ ಸಂಜಯ್‌ನಗರದ 80 ಅಡಿ ರಸ್ತೆಯು ಸುಮಾರು 1 ಕಿ.ಮೀ ಇದ್ದು, 9.82 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಮೇ ಅಂತ್ಯದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಂಡು 30 ದಿನಗಳಲ್ಲಿ ಎರಡೂ ಬದಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿರುತ್ತದೆ. ಈ ಪೈಕಿ ಒಂದು ಬದಿಯಲ್ಲಿ ಕ್ಯೂರಿಂಗ್ ಆಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಮತ್ತೊಂದು ಬದಿ ಕ್ಯೂರಿಂಗ್ ಬಾಕಿಯಿದೆ. ಅದಲ್ಲದೆ ರಸ್ತೆಯ ಎರಡೂ ಬದಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು, ನೀರಿನ ಪೈಪ್ ಲೈನ್, ಬೆಸ್ಕಾಂ, ಒಎಫ್‌ಸಿ ಕೇಬಲ್‌ಗಳಿಗೆ ಡಕ್ಟ್ಸ್ ಅಳವಡಿಕೆ, ಚರಂಡಿ ಕಾಮಗಾರಿ, ಪಾದಚಾರಿ ಮಾರ್ಗ ಸೇರಿದಂತೆ ಇನ್ನಿತರೆ ಸಿವಿಲ್ ಕಾಮಗಾರಿ ಬಾಕಿಯಿದ್ದು, 35 ರಿಂದ 40 ದಿನಗಳಲ್ಲಿ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 
 
ಈ ವೇಳೆ ಆಯುಕ್ತರು ಮಾತನಾಡಿ, ಕ್ಯೂರಿಂಗ್ ಆದ ಕೂಡಲೆ ಎರಡೂ ಕಡೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ, ಜೊತೆಗೆ ಬಾಕಿಯಿರುವ ಕಾಮಗಾರಿಯನ್ನು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments