Webdunia - Bharat's app for daily news and videos

Install App

ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿಗಳು ಯಾರು ಯಾರು?

Webdunia
ಗುರುವಾರ, 25 ಏಪ್ರಿಲ್ 2019 (15:47 IST)
ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ತಿಳಿಸಿದೆ. ನಾಳೆ ದೆಹಲಿಯಲ್ಲಿ ಪಕ್ಷದ ವರಿಷ್ಠರು ಹೆಸರು ಫೈನಲ್ ಮಾಡಲಿದ್ದಾರೆ.

ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಕೋರ್ ಕಮಿಟಿ ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ಆಗಿದೆ. 22 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತವಾಗಿದೆ. ಒಂದು ಸ್ಥಾನ ಜಾಸ್ತಿಯಾಗಬಹುದೇ ಹೊರತು ಕಡಿಮೆ ಆಗುವುದಿಲ್ಲ ಎಂದರು.

ಉಪಚುನಾವಣೆಯ ಹಿನ್ನೆಲೆಯಲ್ಲಿ ಆಕಾಂಕ್ಷಿಗಳೆಲ್ಲರನ್ನೂ ಕರೆಸಿ ಮನವೊಲಿಸಿ ಹೈಕಮಾಂಡ್ ಗೆ ಒಂದೊಂದೇ ಹೆಸರು ಶಿಫಾರಸು ಮಾಡಿದ್ದೇವೆ. ನಾಳೆ ದೆಹಲಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ ಎಂದರು.

ನಮ್ಮ ಅಭ್ಯರ್ಥಿಗಳು ಗೆಲ್ಲುವಂತೆ ನಾವು ಎಲ್ಲಾ ಪ್ರಯತ್ನ ಮಾಡುತ್ತೇವೆ. ಶಾಸಕ ರಮೇಶ್ ಜಾರಕಿಹೊಳಿ ವಿಚಾರ ನಂಗೆ ಏನೂ ಗೊತ್ತಿಲ್ಲ, ನೀವು ಅವರನ್ನೇ ಕೇಳಬೇಕು, ಆ ಬಗ್ಗೆ ಮಾತಾಡಲು ನನಗೆ ಇಷ್ಟ ಇಲ್ಲ ಎಂದರು.

ಕುಂದಗೋಳದಿಂದ  ಎಂ.ಆರ್.ಪಾಟೀಲ್ ಮತ್ತು ಚಿಕ್ಕನಗೌಡರ್ ಹಾಗೂ ಚಿಂಚೋಳಿಯಿಂದ ರಾಮಚಂದ್ರ ಜಾಧವ್, ಸುನೀಲ್ ವಲ್ಯಾಪುರೆ ಹೆಸರು ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಸಂಭವ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ
Show comments