Webdunia - Bharat's app for daily news and videos

Install App

ಜೆಡಿಎಸ್ ಮುಖಂಡರೆಂದು ಮಂಚಕ್ಕೆ ಕರೆಯುತ್ತಿದ್ದ ಕಾಮುಕರು ಅಂದರ್

Webdunia
ಶುಕ್ರವಾರ, 1 ಡಿಸೆಂಬರ್ 2017 (16:33 IST)
ಜೆಡಿಎಸ್ ಮುಖಂಡ ಎಂದು ಫೇಸ್‌ಬುಕ್‌, ವಾಟ್ಸಪ್‌ನಲ್ಲಿ ಪರಿಚಯಿಸಿಕೊಂಡು ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
 
ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌, ವಾಟ್ಸಪ್‌ ಗ್ರೂಪ್‌ಗಳಲ್ಲಿರುವ ಮಹಿಳೆಯರಿಗೆ ಕರೆ ಮಾಡಿ ತಾವು ಜೆಡಿಎಸ್ ಮುಖಂಡರಾಗಿದ್ದು ನಿಮಗೆ ಏನಾದರೂ ಸಹಾಯ ಬೇಕಿದ್ದಲ್ಲಿ ಕೇಳಿ ಎಂದು ಪರಿಚಯ ಮಾಡಿಕೊಂಡು ನಂತರ ಅಶ್ಲೀಲ ಪದಗಳನ್ನು ಬಳಸಿ ಮಾತನಾಡುವುದಲ್ಲದೇ ಮಂಚಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
 
 ನಾಗಮಂಗಲದ ಮಾಜಿ ಶಾಸಕ ಸುರೇಶ್ ಗೌಡ ತಮಗೆ ಆಪ್ತರಾಗಿದ್ದು, ಪಕ್ಷದಲ್ಲಿ ಸ್ಥಾನ ಕೊಡಿಸುತ್ತೇವೆ. ಆದರೆ. ಒಂದು ಬಾರಿ ನೀವು ಮಂಚಕ್ಕೆ ಬರಬೇಕು ಎಂದು ಷರತ್ತುಗಳನ್ನು ವಿಧಿಸುತ್ತಿದ್ದುದಾಗಿ ಮೋಸಹೋದ ಮಹಿಳೆಯರು ಆರೋಪಿಸಿದ್ದಾರೆ.
 
ಮೋಸಹೋದ ಮಹಿಳೆ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳಾದ ಸೋಮಶೇಖರ್ ಗೌಡ ಮತ್ತು ದಿನೇಶ್ ಎನ್ನುವವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments