Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ಸಾವನ್ನಪ್ಪಿದ್ದು ಯಾರು?

ಕಾಡಾನೆ ದಾಳಿಗೆ ಸಾವನ್ನಪ್ಪಿದ್ದು ಯಾರು?
ಹೆಚ್.ಡಿ.ಕೋಟೆ , ಶನಿವಾರ, 4 ಮೇ 2019 (16:27 IST)
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಕಕ್ಕೇರಿ ಗ್ರಾಮದ ಹನುಮಂತಪ್ಪ (50) ಮೃತ ವ್ಯಕ್ತಿಯಾಗಿದ್ದಾರೆ.

ನಾಲೆ ಕಾಂಕ್ರೀಟ್ ಕೆಲಸಕ್ಕೆ ರಾಯಚೂರಿನಿಂದ 8 ಮಂದಿ ಕೂಲಿ ಕಾರ್ಮಿಕರು ಬಂದಿದ್ದರು.

ನಾಲೆ ಕೆಲಸದಲ್ಲಿ ತಲ್ಲೀನರಾಗಿದ್ದಾಗ ಹಠಾತ್ ದಾಳಿ ನಡೆಸಿ ಕಾಲಿನಿಂದ ತುಳಿದಿದೆ ಕಾಡಾನೆ. ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಮಾದಾಪುರ ಸಮೀಪದಲ್ಲಿ ಘಟನೆ ನಡೆದಿದೆ.

ರಾತ್ರೋರಾತ್ರಿ ಬೆಳೆ ಹಾನಿಗೆ ಬಂದಿದ್ದ ಕಾಡಾನೆಗಳನ್ನು ರೈತರು ಓಡಿಸುವಾಗ ಸಂಭವಿಸಿದ ಘಟನೆ ಇದಾಗಿದೆ. ಈ ಕುರಿತು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಕಾಂಗ್ರೆಸ್ ರೆಬೆಲ್ಸ್ ಸ್ಥಿತಿ ಏನಾಗ್ತಿದೆ?