Webdunia - Bharat's app for daily news and videos

Install App

ಮರ್ಯಾದೆ ಇದ್ದವ್ರು ರೆಡ್ಡಿ ಮಗಳ ಮದ್ವೆಗೆ ಹೋಗಲ್ಲ

Webdunia
ಬುಧವಾರ, 26 ಅಕ್ಟೋಬರ್ 2016 (09:54 IST)
ಬೆಂಗಳೂರು: ಮಾಜಿ ಸಚಿವ ಗಣಿಧಣಿ ಖ್ಯಾತಿಯ ಜನಾರ್ಧನ ರೆಡ್ಡಿ ಪುತ್ರಿ ಬ್ರಹ್ಮಿಣಿ ಅವರ ವಿವಾಹವನ್ನು ನಗರದ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಮಾಡುತ್ತಿರುವುದು ಅಶ್ಲೀಲ ಪ್ರದರ್ಶನವಾಗಿದೆ ಎಂದು ಸಚಿವ ರಮೇಶಕುಮಾರ ಹೇಳಿದ್ದಾರೆ.
 

 
ಜನಾರ್ಧನ ರೆಡ್ಡಿ ಮಗಳ ಮದುವೆ ವಿಷಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿರುವ ಸಂಪತ್ತನ್ನು ನಾಲ್ಕು ಗೋಡೆಯ ಒಳಗೆ ಇಟ್ಟುಕೊಂಡು ಅನುಭವಿಸಬೇಕು. ನಾನೊಬ್ಬ ಧನಿಕ ಎಂದು ಸಮಾಜದ ಎದುರು ಪ್ರದರ್ಶನ ಮಾಡಿಕೊಳ್ಳುವುದು ಸರಿಯಲ್ಲ. ನಮ್ಮ ಆಸ್ತಿಯನ್ನು ನಮ್ಮ ಮಕ್ಕಳಿಗೆ ಬಿಟ್ಟು ಹೋಗಬೇಕು. ಅದು ನಿಜವಾದ ತಂದೆಯ ಆದರ್ಶ. ಆದರೆ, ಜನಾರ್ಧನ ರೆಡ್ಡಿ ಅವರ ಅಪ್ಪ-ಅಮ್ಮನ ಬಳಿ ಇಲ್ಲದ ಆಸ್ತಿ ಇವರಲ್ಲಿ ಹೇಗೆ ಬಂತು ಎನ್ನುವ ಪ್ರಶ್ನೆಗೆ ಎಲ್ಲರಿಗೂ ಉತ್ತರ ದೊರಕಿದೆ ಎಂದು ಕಿಡಿಕಾರಿದರು.
 
ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಎಲ್ಲರಿಗೂ ಅವರವರದ್ದೇ ಆದ ಸ್ವತಂತ್ರ ಬದುಕು ಇರುತ್ತದೆ. ನಾನು ತುಂಬಾ ಸ್ವಾಭಿಮಾನಿ ವ್ಯಕ್ತಿ. ಯಾರದ್ದೇ ಮದುವೆಯಾದರೂ ಸರಿಯೇ ಇಷ್ಟೊಂದು ಆಡಂಬರದಲ್ಲಿ ಕೂಡಿರುತ್ತದೆ ಎಂದರೆ ನಾನು ಅಲ್ಲಿ ಕಾಲನ್ನು ಸಹ ಇಡುವುದಿಲ್ಲ. ಅದು ಸಹೋದ್ಯೋಗಿಗಳದ್ದಾಗಿರಲಿ, ನೆಂಟರಿಸ್ಟರದ್ದಾಗಲಿ. ಅಂತಹ ಮದುವೆಯನ್ನು ಸಾರಾಸಗಟವಾಗಿ ತಳ್ಳಿ ಹಾಕುತ್ತೇನೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿಯೇ ನಾನು ತೀರಾ ಸರಳವಾಗಿ ಮದುವೆಯಾಗಿದ್ದೇನೆ.  ಹಾಗಿದ್ದಾಗ ನಾಗರಿಕ ಸಮಾಜಕ್ಕೆ ಮಾಡುವ ಅಪಮಾನದ ಮದುವೆಗೆ ನಾನು ಖಂಡಿತ ಹೋಗಲಾರೆ. ಸ್ವಾಭಿಮಾನ ಇರುವ ಯಾರೊಬ್ಬರೂ ಆ ಮದುವೆಯ ಅಂಗಳಕ್ಕೆ ಕಾಲಿಡುವುದಿಲ್ಲ ಎಂದು ಸಚಿವ ರಮೇಶಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮುಂದುವರಿದು ಮಾತನಾಡಿದ ಅವರು, ನನಗೂ ಸಂಪತ್ತು ಇದೆ. ಹಾಗಂತ ಎಂದೂ ಅದನ್ನು ಸಾರ್ವಜನಿಕವಾಗಿ ಪ್ರದರ್ಶನಕ್ಕಿಟ್ಟಿಲ್ಲ. ವೈಭವದ ಮದುವೆಗಳಿಗೆ ಕಡಿವಾಣ ಹಾಕಬೇಕೆಂದು ಮೊತ್ತ ಮೊದಲ ಬಾರಿಗೆ ವಿಧಾನ ಸಭೆಯಲ್ಲಿ ಖಾಸಗಿ ವಿಧೇಯಕ ಮಂಡಿಸಿದ ವ್ಯಕ್ತಿಯೇ ನಾನು. ಆದರೆ, ಅದು ಚರ್ಚೆಗೆ ಬರದೆ ಹಾಗೆಯೇ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments