ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

Krishnaveni K
ಭಾನುವಾರ, 11 ಮೇ 2025 (15:51 IST)
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ವಹಿಸಲು ಡೊನಾಲ್ಡ್ ಟ್ರಂಪ್ ಯಾರು? ಅವರ ಮಾತು ಕೇಳಿ ಕದನ ವಿರಾಮಕ್ಕೆ ಒಪ್ಪಬೇಕಿರಲಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಸ್ಥಿತಿ ಏರ್ಪಟ್ಟಿದೆ. ತನ್ನ ಮೇಲೆ ಡ್ರೋಣ್, ಕ್ಷಿಪಣಿ ಮೂಲಕ ದಾಳಿಗೆ ಬಂದ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡುತ್ತಿತ್ತು. ಇನ್ನೇನು ಅಧಿಕೃತವಾಗಿ ಯುದ್ಧ ಘೋಷಣೆಯೊಂದೇ ಬಾಕಿಯಿತ್ತು.

ಆಗ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಕದನ ವಿರಾಮಕ್ಕೆ ಮನವೊಲಿಸಿದರು. ಇದನ್ನು ಭಾರತ ಮತ್ತು ಪಾಕಿಸ್ತಾನ ಎರಡೂ ಒಪ್ಪಿ ನಾಳೆ ಮಾತುಕತೆಗೆ ಮುಂದಾಗಿತ್ತು. ಆದರೆ ಇದರ ಬಗ್ಗೆ ಈಗ ದೇಶದೊಳಗೇ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸವರಾಜ ಹೊರಟ್ಟಿ ‘ಪಾಕಿಸ್ತಾನ ಏನಿದ್ದರೂ ನಮಗೆ ಶತ್ರು ರಾಷ್ಟ್ರವೇ. ಯಾರದ್ದೋ ಮಾತು ಕೇಳಿ ಪಾಕಿಸ್ತಾನದ ವಿರುದ್ಧ ಕದನ ವಿರಾಮಕ್ಕೆ ಒಪ್ಪಬಾರದಿತ್ತು. ಈ ಸಂಘರ್ಷದಲ್ಲಿ ಪಾಕಿಸ್ತಾನವನ್ನು ಸರ್ವನಾಶ ಮಾಡಬೇಕಿತ್ತು. ಪಾಕಿಸ್ತಾನ ಸಾಯುವವರೆಗೂ ನಮಗೆ ವೈರಿಗಳೇ. ಎಂದಿಗೂ ಅವರಿಂದ ಒಳ್ಳೆಯದಾಗಲ್ಲ. ಭಾರತ ಪಾಕ್ ನಡುವೆ ಮಧ್ಯಸ್ಥಿಕೆ ಮಾಡಲು ಟ್ರಂಪ್ ಯಾರು? ಅಮೆರಿಕಾ ವಿಚಾರದಲ್ಲಿ ನಾವು ಹೇಳಿದರೆ ಅವರು ಕೇಳುತ್ತಾರಾ? ಮೋದಿಯವರು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಟ್ರಂಪ್ ಮಾತು ಕೇಳಿದ್ದು ತಪ್ಪು ಎಂದು ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments