Publish Date: Mon, 18 May 2026 (16:26 IST)
Updated Date: Mon, 18 May 2026 (16:28 IST)
ಕಲಬುರಗಿ: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಸಾರ್ವಜನಿಕ ಸಾರಿಗೆ ಬಳಸುವ ಪರಿಸ್ಥಿತಿಗೆ ಬರಲು ಕಾರಣ ಯಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದರು.
ಜಿಲ್ಲೆಯ ಕಾಳಗಿ ತಾಲ್ಲೂಕಿನ ಮಾಡಬೂಳ ಗ್ರಾಮದ ಬಳಿ ನಿರ್ಮಾಣವಾಗಿರುವ ನೂತನ ಮೃಗಾಲಯ ಉದ್ಘಾಟನೆಯ ಬಳಿಕ ಮಾಧ್ಯಮಕ್ಕೆ ಅವರು ಪ್ರತಿಕ್ರಿಯಿಸಿದರು.
ಇನ್ನೂ ಬಿಜೆಪಿ ನಾಯಕರು ಸಾರ್ವಜನಿಕ ಸಾರಿಗೆಗಳನ್ನು ಬಳಸಿ, ಅದರ ರೀಲ್ಸ್ ಮಾಡಿದಾಕ್ಷಣ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ನೀಗುತ್ತದೆಯೇ ಎಂದು ಪ್ರಶ್ನೆ ಮಾಡಿದರು.
ಪ್ರಧಾನಿ ಮೋದಿ ಅವರು ಈತನಕ ವಿದೇಶಿ ಯಾತ್ರೆಗೆ ₹850ಕೋಟಿ ವೆಚ್ಚವಾಗಿದೆ. ಸ್ವಯಂ ಘೋಷಿತ ವಿಶ್ವಗುರುವಿನಪಟ್ಟದ ಹೊರತು ಭಾರತ ಜನತೆಗೆ ಸಿಕ್ಕಿದ್ದೇನು. ಆತ್ಮನಿರ್ಭರ ಭಾರತ ಘೋಷಣೆ ಏನಾಯಿತು. ಭಾರತ ಇಂಧನದಲ್ಲಿ ಸ್ವಾವಲಂಬಿತನ ಸಾಧಿಸಿತೇ ಎಂದು ಕುಟುಕಿದರು.
ಇನ್ನೂ ದೇಶ ಕಷ್ಟದ ಸ್ಥಿತಿಯಲ್ಲಿರುವಾಗ ಮೋದಿ ವಿದೇಶಕ್ಕೆ ಹೋಗುತ್ತಾರೆ. ಆರ್ಥಿಕ ಸ್ಥಿತಿಗತಿ, ಪೆಟ್ರೊಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣಗಳನ್ನು ಸಂಸತ್ತಿನಲ್ಲೇ ಹೇಳಬೇಕಿತ್ತು. ಅದಕ್ಕಾಗಿ ನೆದರ್ಲ್ಯಾಂಡ್ಸ್ಗೆ ಹೋಗುವ ಅನಿರ್ವಾಯವಿತ್ತೆ ಎಂದು ಪ್ರಶ್ನೆ ಮಾಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ