Webdunia - Bharat's app for daily news and videos

Install App

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

Krishnaveni K
ಶುಕ್ರವಾರ, 4 ಜುಲೈ 2025 (12:32 IST)
ಬೆಂಗಳೂರು: ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಅವಹೇಳನಕಾರೀ ಹೇಳಿಕೆ ನೀಡಿದ ಬಳಿಕ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರು ಭಾರೀ ಚಾಲ್ತಿಯಲ್ಲಿದೆ. ಅಷ್ಟಕ್ಕೂ ಈ ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ?

1989 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಆಡಳಿತಾತ್ಮಕ ಹುದ್ದೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಕಳೆದ ವರ್ಷವಷ್ಟೇ ಅವರ ಪತಿ ರಜನೀಶ್ ಗೊಯೆಲ್ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ಸರ್ಕಾರವೇ ಶಾಲಿನಿ ರಜನೀಶ್ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿತ್ತು.

ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಪಿಎಚ್ ಡಿ ಪದವಿ ಪಡೆದವರು. ಸೈಕಲಾಜಿಯಲ್ಲಿ ಗೋಲ್ಡ್ ಮೆಡಲ್, ಅಮೆರಿಕಾದಲ್ಲಿ ಎಂಬಿಎ ಪದವಿ ಪಡೆದ ವಿದ್ಯಾವಂತೆ. ಅಷ್ಟೇ ಅಲ್ಲ ಬರವಣಿಗೆಯಲ್ಲೂ ಅವರಿಗೆ ಅಪಾರ ಆಸಕ್ತಿ. ಇದುವರೆಗೆ ಒಟ್ಟು 13 ಪುಸ್ತಕಗಳನ್ನು ಬರೆದಿದ್ದಾರೆ.

ಶಾಲಿನಿ ರಜನೀಶ್ ಪೂರ್ವಜರು ಪಂಜಾಬ್ ನವರು. ಮೂಲತಃ ಅವರು ಕನ್ನಡಿಗರು ಅಲ್ಲದೇ ಇದ್ದರೂ ಅವರ ಸೇವೆ ಆರಂಭವಾಗಿದ್ದು ಕರ್ನಾಟಕದಲ್ಲಿಯೇ. ಹೀಗಾಗಿ ನಿರರ್ಗಳವಾಗಿ ಕನ್ನಡ ಮಾತನಾಡಬಲ್ಲರು. ಕನ್ನಡದ ವಚನಗಳನ್ನು ಓದಿಕೊಂಡಿದ್ದಾರೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಎಂದರೆ ಎಷ್ಟು ಪ್ರಭಾವೀ ಸ್ಥಾನವೆಂದರೆ ಸರ್ಕಾರ ಹೊರಡಿಸುವ ಯಾವುದೇ ಆದೇಶಕ್ಕೂ ಇವರ ಸಹಿ ಇಲ್ಲದೇ ಮಾನ್ಯತೆ ಬರುವುದಿಲ್ಲ. ಯಾವುದೇ ಮುಖ್ಯ ಕಾರ್ಯದರ್ಶಿಗಳೂ ಆಯಾ ರಾಜ್ಯದ ಐಎಎಸ್ ಅಧಿಕಾರಿಗಳಿಗೇ ಬಾಸ್ ಆಗಿರುತ್ತಾರೆ. ಸರ್ಕಾರದ ಯಾವುದೇ ಮಹತ್ವದ ನಿರ್ಧಾರಗಳು, ಸಭೆಗಳಲ್ಲಿ ಅವರೂ ಹಾಜರಿರಬೇಕು. ಮುಖ್ಯಮಂತ್ರಿಗಳ ಜೊತೆಗೆ ಸಲಹೆಗಾರರಾಗಿ ಆಡಳಿತದ ಮುಖ್ಯಸ್ಥರಾಗಿ ಅವರು ಕಾರ್ಯನಿರ್ವಹಿಸುತ್ತಾರೆ. ಇದೀಗ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಇನ್ನೂ ಎರಡು ವರ್ಷ ಅವರು ಕಾರ್ಯನಿರ್ವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments