Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಶೋಭಾ ಯಾರು?: ಪರಮೇಶ್ವರ್ ಆಕ್ರೋಶ

ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಶೋಭಾ ಯಾರು?: ಪರಮೇಶ್ವರ್ ಆಕ್ರೋಶ
ಕಲಬುರಗಿ , ಮಂಗಳವಾರ, 11 ಜುಲೈ 2017 (15:21 IST)
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಲು ಶೋಭಾ ಯಾರು? ಎಂದು ಗುಡುಗಿದ್ದಾರೆ. 
 
ಎಐಸಿಸಿ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿ ದೊಡ್ಡ ಲೀಡರ್, ಭವಿಷ್ಯದ ಪ್ರಧಾನಮಂತ್ರಿಯಾಗಲಿರುವ ನಾಯಕರು. ಅಂತಹ ನಾಯಕರ ವಿರುದ್ಧ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಗುಡುಗಿದ್ದಾರೆ.
 
ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆಯಿಲ್ಲ. ಮನಬಂದಂತೆ ಹೇಳಿಕೆ ನೀಡುವುದೇ ಬಿಜೆಪಿ ನಾಯಕರ ವೃತ್ತಿಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಕೆಲ ದಿನಗಳ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಪ್ರಧಾನಿ ಮೋದಿಯನ್ನು ಟೀಕಿಸಲು ಅವರಿಗೆ ಯಾವ ಅರ್ಹತೆಯಿದೆ ಎಂದು ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೆಂಪಯ್ಯನ ಮೂಲಕವೇ ಎಲ್ಲಾ ಮಾಡ್ಸಿ: ಕರಂದ್ಲಾಜೆ ಲೇವಡಿ