Select Your Language

Notifications

webdunia
webdunia
webdunia
webdunia

ಉಪಚುನಾವಣೆ ರಾಮನಗರದಲ್ಲಿ ಯಾರಾಗಲಿದ್ದಾರೆ ಜೆಡಿಎಸ್ ಅಭ್ಯರ್ಥಿ?

ಉಪಚುನಾವಣೆ ರಾಮನಗರದಲ್ಲಿ ಯಾರಾಗಲಿದ್ದಾರೆ ಜೆಡಿಎಸ್ ಅಭ್ಯರ್ಥಿ?
ಬೆಂಗಳೂರು , ಬುಧವಾರ, 3 ಅಕ್ಟೋಬರ್ 2018 (19:44 IST)
ಜಮಖಂಡಿ ಹಾಗೂ ರಾಮನಗರ ವಿಧಾನ ಸಭೆ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಈ ನಡುವೆ ಸಿಎಂ ತವರು ಕ್ಷೇತ್ರವಾಗಿರುವ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ರಾಮನಗರ ಹಾಗೂ ಚನ್ನಪಟ್ಟಣ ಎರಡೂ ವಿಧಾನ ಸಭೆ ಕ್ಷೇತ್ರಗಳಿಂದ ಗೆಲುವು ಸಾಧಿಸಿದ್ದ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟಿದ್ದರು.

ಹೀಗಾಗಿ ಉಪ ಚುನಾವಣೆಯಲ್ಲಿ ಸಿಎಂ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಇಲ್ಲವೇ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಇಬ್ಬರ ಪೈಕಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಕೇತಗಾನಹಳ್ಳಿಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರ ಸಭೆಯನ್ನು ಸಿಎಂ ಕರೆದಿದ್ದ, ಮುಖಂಡರ ಅಭಿಪ್ರಾಯ ಆಲಿಸಿ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ದಸರಾ ಸುಧಾ ಮೂರ್ತಿಗೆ ಆಹ್ವಾನ