Webdunia - Bharat's app for daily news and videos

Install App

ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾದವರು ಯಾರು ಗೊತ್ತಾ…?

Webdunia
ಶುಕ್ರವಾರ, 22 ಡಿಸೆಂಬರ್ 2017 (16:04 IST)
ಬೆಂಗಳೂರು: ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯು ಪ್ರತಿವರ್ಷದಂತೆ ಈ ವರ್ಷವು ಕೂಡ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ವರ್ಷ ‘ಶತಮಾನ ಶ್ರೀ’ ಪ್ರಶಸ್ತಿಯನ್ನು ಸಿದ್ಧ ಗಂಗಾ ಮಠದ ಶ್ರೀ ಡಾ.ಶಿವಕುಮಾರಸ್ವಾಮೀಜಿ ಅವರಿಗೆ ನೀಡಿ ಗೌರವಿಸಬೇಕೆಂದು ನಿರ್ಧರಿಸಿದೆ.


ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯು ಪ್ರತಿವರ್ಷ ನೀಡುವ ‘ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ’, ‘ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ’ಗೆ ಅರ್ಹರನ್ನು ಆಯ್ಕೆ ಮಾಡಲು ಸಭೆ ನಡೆಸಿದ್ದು, ಶಿವಕುಮಾರ ಸ್ವಾಮೀಜಿ ಅವರಿಗೆ ‘ಶತಮಾನ ಶ್ರೀ’ ಪ್ರಶಸ್ತಿಯನ್ನುನೀಡಿ ಗೌರವಿಸಲು ನಿರ್ಧರಿಸಿದೆ. ಹಾಗೆ ಸಿಎಂ ಸಿದ್ದರಾಮಯ್ಯ ಮತ್ತು ಚಿತ್ರ ನಟ ಪ್ರಕಾಶ್ ರೈ ಅವರನ್ನು ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


ಪ್ರಸಾರ ಭಾರತಿ ಮಂಡಳಿ ಅಧ್ಯಕ್ಷ ಡಾ.ಎ.ಸೂರ್ಯಪ್ರಕಾಶ್, ಅರೆಕೆರೆ ಜಯರಾಮ್, ಮಂಜುನಾಥ ಅದ್ದೆ, ಬಿ.ವಿ.ಮಲ್ಲಿಕಾರ್ಜುನಯ್ಯ, ಸುಗತ ಶ್ರೀನಿವಾಸರಾಜು, ಈಶ್ವರ ದೈತೋಟ, ಹಿರಿಯ ಪತ್ರಕರ್ತರಾದ ರಾಜಾ ಶೈಲೇಶ್ ಚಂದ್ರಗುಪ್ತ, ಎಚ್.ಆರ್.ರಂಗನಾಥ್, ಆಯೇಶಾ ಖಾನಮ್, ಕೆ.ವೆಂಕಟೇಶ್ ಹಾಗೂ ವಿ,ರಾಮಸ್ವಾಮಿ ಕಣ್ವ ಅವರನ್ನು ‘ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪ್ರಧಾನ ಸಮಾರಂಭವು ಡಿ.31 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments