Webdunia - Bharat's app for daily news and videos

Install App

ಬಿಜೆಪಿ ಪಾದಯಾತ್ರೆ ಬಗ್ಗೆ ಗುರ್ ಅಂತಿದ್ದ ಕುಮಾರಸ್ವಾಮಿ ಮುನಿಸು ತಣ್ಣಗಾಗಿಸಿದ್ದು ಯಾರು ಗೊತ್ತಾ

Krishnaveni K
ಶನಿವಾರ, 3 ಆಗಸ್ಟ್ 2024 (17:37 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದ ಬಿಜೆಪಿ ವಿರುದ್ಧ ದೋಸ್ತಿ ಪಕ್ಷ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮೊದಲು ಸಿಟ್ಟಾಗಿದ್ದರು. ಬಳಿಕ ಅವರನ್ನು ತಣ್ಣಗಾಗಿಸಿದ್ದು ಯಾರು ಗೊತ್ತಾ?

ಬಿಜೆಪಿ ನೇತೃತ್ವದ ಪಾದಯಾತ್ರೆಗೆ ತಮ್ಮ ಕುಟುಂಬದ ಬದ್ಧ ಎದುರಾಳಿ ಪ್ರೀತಂ ಗೌಡರನ್ನು ಆಹ್ವಾನಿಸಿದ್ದು ಕುಮಾರಸ್ವಾಮಿ ಸಿಟ್ಟಿಗೆ ಕಾರಣವಾಗಿತ್ತು. ಹೀಗಾಗಿ ಬಹಿರಂಗವಾಗಿಯೇ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಕುಮಾರಸ್ವಾಮಿ ಜೊತೆ ಸಂಧಾನ ಸಭೆ ನಡೆಸಿದ್ದರು. ಬಳಿಕ ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗಿಯಾಗಲು ಒಪ್ಪಿತ್ತು.

ಆದರೆ ಕುಮಾರಸ್ವಾಮಿಯ ಸಿಟ್ಟು ತಣ್ಣಗಾಗಿಸಿದ್ದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯಂತೆ. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ಪ್ರಲ್ಹಾದ್ ಜೋಶಿ, ಬಿ ವೈ ವಿಜಯೇಂದ್ರ ಖುದ್ದಾಗಿ ಕುಮಾರಸ್ವಾಮಿ ಜೊತೆ ಸಭೆ ನಡೆಸಿ ಅವರ ಮನವೊಲಿಸಿದ್ದರು.

ಈ ಪೈಕಿ ಪ್ರಲ್ಹಾದ್ ಜೋಶಿ ಮಾತಿಗೆ ಕುಮಾರಸ್ವಾಮಿ ಬೆಲೆ ಕೊಟ್ಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡರು ಎನ್ನಲಾಗಿದೆ. ಹೀಗಾಗಿಯೇ ಇಂದು ಪಾದಯಾತ್ರೆಗೆ ಚಾಲನೆ ಸಂದರ್ಭದಲ್ಲಿ ಮಾತನಾಡುವಾಗ ಜೋಶಿಯನ್ನು ಕುಮಾರಸ್ವಾಮಿ ಹಾಡಿ ಹೊಗಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments