ಈ ಬಾರಿ ಗಣರಾಜ್ಯೋತ್ಸವ ನಿರೂಪಣೆ ಯಾರದು?

Webdunia
ಬುಧವಾರ, 26 ಜನವರಿ 2022 (09:36 IST)
ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಸಂಭ್ರಮ.

ಇದೇ ವೇಳೆ ಡಾ. ಗಿರಿಜಾ ಅವರಿಗೆ ಈ ಬಾರಿಯ ಗಣರಾಜ್ಯೋತ್ಸವ ಹೆಚ್ಚು ಸಂಭ್ರಮದಿಂದ ಕೂಡಿದೆ. ಹೋರಾಟ ನಡೆಸಿ, ಸರ್ಕಾರಿ ಕಾರ್ಯಕ್ರಮದ ನಿರೂಪಣೆ ಗಳಿಸಿರುವ ಡಾ. ಗಿರಿಜಾ ಅವರಿಗೆ ಇಂದು ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ ನೀಡಲಾಗಿದೆ.

ತಮಗೆ ಅವಕಾಶ ಕಲ್ಪಿಸುತ್ತಿಲ್ಲವೆಂದು ರೊಚ್ಚಿಗೆದ್ದಿದ್ದ ಡಾ. ಗಿರಿಜಾ ಮುಖ್ಯಮಂತ್ರಿಯ ಮನೆ ಮುಂದೆ ಏಕಾಂಗಿ ಪ್ರತಿಭಟನೆ ಸಹ ನಡೆಸಿದ್ದರು. ಕೇವಲ ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರುಗಳಿಗೆ ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಣೆಗೆ ಅವಕಾಶ ನೀಡಲಾಗುತ್ತಿದೆ ಎಂಬುದು ಅವರ ಪ್ರತಿಭಟನೆಯ ಧ್ವನಿಯಾಗಿತ್ತು.

ಹಳೆಯ ನಿರೂಪಕರು ಹಾಗೂ ಗಾಯಕರಿಗೆ ಮಣೆ ಹಾಕುತ್ತಿದ್ದಾರೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಕೇವಲ ಇಬ್ಬರೇ ನಿರೂಪಕರು. ಹೀಗಾಗಿ ನಿರೂಪಕರು ಹಾಗೂ ಗಾಯಕರ ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ನೀಡುವಂತೆ ಕಳೆದ ಆಗಸ್ಟ್ ತಿಂಗಳಲ್ಲಿ ಡಾ. ಗಿರಿಜಾ ಆಗ್ರಹಿಸಿದ್ದರು.

ನೇರವಾಗಿ ಶಂಕರ್ ಪ್ರಕಾಶ್ ಹಾಗೂ ಅಪರ್ಣಾ ವಿರುದ್ದ ಅಸಮಾಧಾನ ಹೊರ ಹಾಕಿದ್ದ ನಿರೂಪಕಿ ಗಿರಿಜಾ, ಹತ್ತಾರು ವರ್ಷದಿಂದ ಅವರೇ ನಿರೂಪಕರಾಗಿದ್ದಾರೆ. ಸರ್ಕಾರ ಬದಲಾಗುತ್ತೆ, ಸಚಿವರು ಬದಲಾಗ್ತಾರೆ, ಆದ್ರೆ ಸರ್ಕಾರಿ ಕಾರ್ಯಕ್ರಮದ ನಿರೂಪಕರು ಬದಲಾಗಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಜಿಲ್ಲಾಡಳಿತ, ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಪ್ರತಿಷ್ಠಿತ ಕಾರ್ಯಕ್ರಮದ ನಿರೂಪಣೆಗೆ ಡಾ. ಗಿರಿಜಾ ಅವರಿಗೆ ಅವಕಾಶ ಕಲ್ಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments