Publish Date: Tue, 24 Dec 2019 (19:44 IST)
Updated Date: Tue, 24 Dec 2019 (19:46 IST)
ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಕೃತ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ.
ಕಾರ್ಕಳದ ಬೆಳ್ಮಣ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯರು ಇದ್ದ ಮನೆಯಲ್ಲಿ ನುಗ್ಗಿದ್ದ ಇಬ್ಬರು ದುಷ್ಕರ್ಮಿಗಳು ಮನೆಯಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ಇದೀಗ ಆರೋಪಿಗಳು ಸೆರೆ ಸಿಕ್ಕಿದ್ದು ಬೆಳ್ಮಣದ ರೋನಾಲ್ಡ್, ಶಿರ್ವದ ಸ್ಟೀಫನ್ ಬಂಧಿತರಾದವರು.
ಬೃಂದಾವನ ಮನೆಗೆ ನುಗ್ಗಿ ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಕೊಲೆ ಮಾಡಿದ ಬಳಿಕ ಮೃತದೇಹವನ್ನು ಪ್ಲಾಸ್ಟಿಕ್ ಟರ್ಪಲ್ ನಲ್ಲಿ ಸುತ್ತಿ ಬಾವಿಗೆ ಎಸೆದಿದ್ದರು.