Select Your Language

Notifications

webdunia
webdunia
webdunia
webdunia

ಸಾಲಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ರೈತ ಯಾರು ಗೊತ್ತಾ?

ಸಾಲಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ರೈತ ಯಾರು ಗೊತ್ತಾ?
ರಾಯಚೂರು , ಗುರುವಾರ, 24 ಜನವರಿ 2019 (16:06 IST)
ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋರೆಬಾಳ ತಾಂಡಾದಲ್ಲಿ ಈ ದುರ್ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಾತನನ್ನು ಪಾಂಡಪ್ಪ ಜಾಧವ (48) ಎಂದು‌ ಗುರುತಿಸಲಾಗಿದೆ. 

ಲಿಂಗಸುಗೂರು ಪಟ್ಟಣದ ಎಸ್‌ಬಿಎಚ್ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕುಗಳಲ್ಲಿ ಸುಮಾರು 7 ಲಕ್ಷ ರೂಪಾಯಿ ಸಾಲ ಮಾಡಿಕೊಂಡು ತನ್ನ ಜಮೀನಿನಲ್ಲಿ ಶೇಂಗಾ, ಜೋಳ, ಸೂರ್ಯಕಾಂತಿ ಬೆಳೆ ಬಿತ್ತನೆ ಮಾಡಿದ್ದ. ಆದರೆ ಬೆಳೆ ಕೈಕೊಟ್ಟ ಪರಿಣಾಮ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. 

ಲಿಂಗಸುಗೂರು ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಂತ ತಂಗಿಯ ಗಂಡನ ಕಥೆ ಮುಗಿಸಿದ ಪಾಪಿ!