Webdunia - Bharat's app for daily news and videos

Install App

ಖರ್ಗೆ ಕೋಟೆಯಲ್ಲಿ ಠಿಕಾಣಿ ಹೂಡಿದೋರು ಯಾರು?

Webdunia
ಮಂಗಳವಾರ, 7 ಮೇ 2019 (18:02 IST)
ಬಿಸಿಲೂರು ಖರ್ಗೆಯವರ ಭದ್ರ ಕೋಟೆ. ಇಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕೈ ಪಡೆ ನಾಯಕರು ಭದ್ರವಾಗಿ ಠಿಕಾಣಿ ಹೂಡಿದ್ದಾರೆ.

ಚಿಂಚೋಳಿ ವಿಧಾನಸಭೆ ಉಪಚುನಾವಣೆಯಲ್ಲಿ ಕ್ಷೇತ್ರವನ್ನ ಪ್ರತಿಷ್ಠೆಯಾಗಿಸಿಕೊಂಡ ಮೈತ್ರಿ ಪಕ್ಷ ಹಾಗೂ ಬಿಜೆಪಿ ಭರ್ಜರಿ ಸಮಾವೇಶಗಳನ್ನು, ಸಭೆಗಳನ್ನು ನಡೆಸುತ್ತಿವೆ.

ಏತನ್ಮಧ್ಯೆ, ದೆಹಲಿ ಪ್ರವಾಸವನ್ನ ಮೊಟಕುಗೊಳಿಸಿ ಕಲಬುರಗಿಯಲ್ಲೆ ಠಿಕಾಣಿ ಹೂಡಲು ಮಲ್ಲಿಕಾರ್ಜುನ ಖರ್ಗೆ ನಿರ್ಧಾರ ಮಾಡಿದ್ದಾರೆ.

ನಿನ್ನೆ ನವದೆಹಲಿಗೆ ತೆರಳಬೇಕಿದ್ದ ಕೈ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಉಪಚುನಾವಣೆಗಾಗಿ ಪ್ರವಾಸ ರದ್ದು ಪಡಿಸಿದ್ದಾರೆ.  

ಆದರೆ ಬಿಜೆಪಿ ಹಲವು ನಾಯಕರು ಚಿಂಚೋಳಿಯಲ್ಲೆ ಮೊಕ್ಕಾಂ ಹೂಡಿದ್ದರಿಂದ ಪ್ರವಾಸ ರದ್ದು ಮಾಡಲು ಮತ್ತೊಂದು ಕಾರಣ ಎನ್ನಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಉಮೇಶ್ ಜಾಧವ್ ತಮ್ಮ ಎದುರಾಳಿ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಅವರ ಪುತ್ರ ಅವಿನಾಶ್ ಜಾಧವ್ ಕಾಂಗ್ರೆಸ್ ವಿರುದ್ಧದ ಸ್ಪರ್ಧೆಯನ್ನ ಸವಾಲಾಗಿ ಸ್ವೀಕರಿಸಿದ್ದಾರೆ ಖರ್ಗೆ.

ಶತಾಯಗತಾಯ ಚಿಂಚೋಳಿ ಕ್ಷೇತ್ರವನ್ನ ತನ್ನ ತೆಕ್ಕೆಗೆ ಹಾಕಿಕೊಳ್ಳಲು ಭಾರಿ ಕಸರತ್ತು ನಡೆಸಿರುವ ಕೈ - ಕಮಲ ನಾಯಕರು ಕ್ಷೇತ್ರದಲ್ಲೇ ಠಿಕಾಣಿ ಹೂಡೋ ಮೂಲಕ ಮತಬೇಟೆ ಮುಂದುವರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments