Webdunia - Bharat's app for daily news and videos

Install App

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

Krishnaveni K
ಶುಕ್ರವಾರ, 27 ಜೂನ್ 2025 (09:21 IST)
ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಮರು ಆಯ್ಕೆಯಾಗಲ್ಲ. ಬದಲಾಗಿ ಹೈಕಮಾಂಡ್ ಕೊನೆಯ ಕ್ಷಣದಲ್ಲಿ ಟ್ವಿಸ್ಟ್ ನೀಡಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿದೆ.

ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳ ಪಕ್ಷದ ಅಧ್ಯಕ್ಷ ಸ್ಥಾನಗಳನ್ನೂ ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ತೀರ್ಮಾನಿಸಲಿದೆ. ಮುಂದಿನ ವಾರದಲ್ಲಿ ಬಿಜೆಪಿಗೆ ಹೊಸ ನಾಯಕ ಯಾರು ಎಂದು ತಿಳಿಯಲಿದೆ. ಮೂಲಗಳ ಪ್ರಕಾರ ವಿಜಯೇಂದ್ರ ಬದಲಿಗೆ ಅಚ್ಚರಿಯ ಅಭ್ಯರ್ಥಿಯೊಬ್ಬರನ್ನು ಘೋಷಿಸಿದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

ಈ ಮೊದಲು ವಿ ಸೋಮಣ್ಣ ಹೆಸರು ಬಲವಾಗಿ ಕೇಳಿಬರುತ್ತಿತ್ತು. ಆದರೆ ಸೋಮಣ್ಣ ಈಗಾಗಲೇ ಕೇಂದ್ರ ಸಚಿವರೂ ಆಗಿರುವುದರಿಂದ ಆ ಸ್ಥಾನವನ್ನೇ ನಿಭಾಯಿಸುವಂತೆ ಹೈಕಮಾಂಡ್ ಸಲಹೆ ನೀಡಿದೆ. ಉಳಿದಂತೆ ಆರ್ ಅಶೋಕ್ ಕೂಡಾ ಈಗ ರೇಸ್ ನಲ್ಲಿದ್ದಾರೆ. ಸದ್ಯಕ್ಕೆ ದೆಹಲಿಯಲ್ಲೇ ಬೀಡುಬಿಟ್ಟಿದ್ದು ಹೈಕಮಾಂಡ್ ಜೊತೆ ನಿರಂತರ ಮಾತುಕತೆಯಲ್ಲಿದ್ದಾರೆ.

ಇನ್ನೊಂದೆಡೆ ವಿಜಯೇಂದ್ರ ವಿರೋಧಿ ಬಣವೂ ದೆಹಲಿಯಲ್ಲಿ ಬೀಡುಬಿಟ್ಟಿದೆ. ಬಿವೈ   ವಿಜಯೇಂದ್ರರನ್ನು ಬದಲಾಯಿಸಬೇಕು ಎಂದು ವಿರೋಧಿ ಬಣ ಒತ್ತಡ ಹಾಕುತ್ತಿದೆ. ಹೀಗಾಗಿ ವಿಜಯೇಂದ್ರ ಬದಲಾಗಿ ಅರವಿಂದ್ ಬೆಲ್ಲದ್, ವಿ ಸುನಿಲ್ ಕುಮಾರ್ ಕೂಡಾ ರೇಸ್ ನಲ್ಲಿದ್ದಾರೆ. ಒಂದು ವೇಳೆ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕೈ ತಪ್ಪಿದರೆ ಅವರಿಗೆ ಬೇರೊಂದು ಉತ್ತಮ ಹುದ್ದೆಯನ್ನೇ ನೀಡಬಹುದು. ಇಲ್ಲದೇ ಹೋದರೆ ಬಿಜೆಪಿಯಲ್ಲಿ ಮತ್ತೊಂದು ಅಸಮಾಧಾನಿತರ ಗುಂಪು ಸೃಷ್ಟಿಯಾಗಲಿದೆ. ಇದೆಲ್ಲದರ ಜೊತೆಗೆ ಈಗ ಬಿಎಸ್ ಯಡಿಯೂರಪ್ಪ ಮತ್ತೆ ಪಕ್ಷದಲ್ಲಿ ಸಕ್ರಿಯರಾಗಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments