ಯಾರಾಗ್ತಾರೆ ಬಿಜೆಪಿ ಸಾರಥಿ?

Webdunia
ಸೋಮವಾರ, 26 ಜೂನ್ 2023 (17:47 IST)
ಕರ್ನಾಟಕ ಬಿಜೆಪಿ ಪಡೆಯ ನಾಯಕತ್ವ ಯಾರಿಗೆ ವಲಿಯಲಿದೆ ಎಂಬ ದೊಡ್ಡ ಪ್ರಶ್ನೆಗೆ ಉತ್ತ್ರ ಇನ್ನೂ ನಿಗೂಢವಾಗಿಯೇ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೇರಲು ನಾಯಕರು ಪೈಪೋಟಿ ನಡೆಸುತ್ತಿದ್ದು, ರಾಜ್ಯದಲ್ಲಿ ಕೇಸರಿ ಪಡೆ ಮುನ್ನಡೆಸಲು ಹಲವು ನಾಯಕರು ಆಸಕ್ತಿ ತೋರಿದ್ದಾರೆ. ಅಧ್ಯಕ್ಷ ಪಟ್ಟವನ್ನ ನನಗೆ ಕೊಡಿ ಎಂದು ಮಾಜಿ ಸಚಿವ ಆರ್.ಅಶೋಕ್ ವರಿಷ್ಠರಿಗೆ ಮನವಿ ಮಾಡಿದ್ದು, ನನಗೂ ಅಧ್ಯಕ್ಷ ಸ್ಥಾನ ಬೇಕೆಂದು ವಿ.ಸೋಮಣ್ಣ ಬಹಿರಂಗವಾಗಿಯೇ ಕೇಳಿದ್ದಾರೆ. ಮತ್ತೊಂದು ಕಡೆ ಮಾಜಿ ಸಚಿವ ಸುನೀಲ್ ಕುಮಾರ್ ಕೂಡ ಪರೋಕ್ಷವಾಗಿ ನಾಯಕತ್ವ ವಹಿಸಿಕೊಳ್ಳಲು ನಾನು ಸಿದ್ಧವೆಂದಿದ್ದಾರೆ. ಇವರ ನಡುವೆ ಪಕ್ಷ ಏನೇ ಸ್ಥಾನ ಕೊಟ್ರೆ ನಿಭಾಯಿಸ್ತೀನಿ ಎಂದು ಯತ್ನಾಳ್ ಸಹ ಹೇಳಿದ್ದಾರೆ. ಈಗಾಗಲೇ ಕಟೀಲು ಅವಧಿ ಮುಗಿದಿದ್ದು ಚುನಾವಣೆ ಇದ್ದಿದ್ರಿಂದ ಅವರನ್ನೇ ಮುಂದುವರೆಸಲಾಗಿತ್ತು. ಆದ್ರೆ ಚುನಾವಣೆಯಲ್ಲಿ ಆದ ಸೋಲಿನಿಂದ ಕಟೀಲ್​ರನ್ನ ಬದಲಾಯಿಸಬೇಕೆಂದು ಸಾಕಷ್ಟು ನಾಯಕರು ಒತ್ತಾಯಿಸಿದ್ದಾರೆ. ಹೀಗಾಗಿ ಇನ್ನೊಂದು ವಾರದಲ್ಲಿ ಕಟೀಲ್​ರನ್ನ ಬದಲಾವಣೆ ಮಾಡುವ ಸಾಧ್ಯತೆಯಿದ್ದು, ಮುಂದಿನ ಬಿಜೆಪಿಯ ರಾಜ್ಯಾಧ್ಯಕ್ಷ ಯಾರೆಂದು ತೀವ್ರ ಕುತೂಹಲ ಕೆರಳಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments