Webdunia - Bharat's app for daily news and videos

Install App

ಯಾರಾಗ್ತಾರೆ ಬಿಜೆಪಿ ಸಾರಥಿ?

Webdunia
ಸೋಮವಾರ, 26 ಜೂನ್ 2023 (17:47 IST)
ಕರ್ನಾಟಕ ಬಿಜೆಪಿ ಪಡೆಯ ನಾಯಕತ್ವ ಯಾರಿಗೆ ವಲಿಯಲಿದೆ ಎಂಬ ದೊಡ್ಡ ಪ್ರಶ್ನೆಗೆ ಉತ್ತ್ರ ಇನ್ನೂ ನಿಗೂಢವಾಗಿಯೇ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೇರಲು ನಾಯಕರು ಪೈಪೋಟಿ ನಡೆಸುತ್ತಿದ್ದು, ರಾಜ್ಯದಲ್ಲಿ ಕೇಸರಿ ಪಡೆ ಮುನ್ನಡೆಸಲು ಹಲವು ನಾಯಕರು ಆಸಕ್ತಿ ತೋರಿದ್ದಾರೆ. ಅಧ್ಯಕ್ಷ ಪಟ್ಟವನ್ನ ನನಗೆ ಕೊಡಿ ಎಂದು ಮಾಜಿ ಸಚಿವ ಆರ್.ಅಶೋಕ್ ವರಿಷ್ಠರಿಗೆ ಮನವಿ ಮಾಡಿದ್ದು, ನನಗೂ ಅಧ್ಯಕ್ಷ ಸ್ಥಾನ ಬೇಕೆಂದು ವಿ.ಸೋಮಣ್ಣ ಬಹಿರಂಗವಾಗಿಯೇ ಕೇಳಿದ್ದಾರೆ. ಮತ್ತೊಂದು ಕಡೆ ಮಾಜಿ ಸಚಿವ ಸುನೀಲ್ ಕುಮಾರ್ ಕೂಡ ಪರೋಕ್ಷವಾಗಿ ನಾಯಕತ್ವ ವಹಿಸಿಕೊಳ್ಳಲು ನಾನು ಸಿದ್ಧವೆಂದಿದ್ದಾರೆ. ಇವರ ನಡುವೆ ಪಕ್ಷ ಏನೇ ಸ್ಥಾನ ಕೊಟ್ರೆ ನಿಭಾಯಿಸ್ತೀನಿ ಎಂದು ಯತ್ನಾಳ್ ಸಹ ಹೇಳಿದ್ದಾರೆ. ಈಗಾಗಲೇ ಕಟೀಲು ಅವಧಿ ಮುಗಿದಿದ್ದು ಚುನಾವಣೆ ಇದ್ದಿದ್ರಿಂದ ಅವರನ್ನೇ ಮುಂದುವರೆಸಲಾಗಿತ್ತು. ಆದ್ರೆ ಚುನಾವಣೆಯಲ್ಲಿ ಆದ ಸೋಲಿನಿಂದ ಕಟೀಲ್​ರನ್ನ ಬದಲಾಯಿಸಬೇಕೆಂದು ಸಾಕಷ್ಟು ನಾಯಕರು ಒತ್ತಾಯಿಸಿದ್ದಾರೆ. ಹೀಗಾಗಿ ಇನ್ನೊಂದು ವಾರದಲ್ಲಿ ಕಟೀಲ್​ರನ್ನ ಬದಲಾವಣೆ ಮಾಡುವ ಸಾಧ್ಯತೆಯಿದ್ದು, ಮುಂದಿನ ಬಿಜೆಪಿಯ ರಾಜ್ಯಾಧ್ಯಕ್ಷ ಯಾರೆಂದು ತೀವ್ರ ಕುತೂಹಲ ಕೆರಳಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments