Webdunia - Bharat's app for daily news and videos

Install App

ತುಮಕೂರಿನ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?

Webdunia
ಬುಧವಾರ, 19 ಏಪ್ರಿಲ್ 2023 (08:06 IST)
ತುಮಕೂರು : ತುಮಕೂರು ಜಿಲ್ಲೆಯಲ್ಲೇ ಕೊರಟಗೆರೆ ಅತಿ ಚಿಕ್ಕ ಕ್ಷೇತ್ರ. ಈ ವಿಧಾನಸಭಾ ಕ್ಷೇತ್ರ ಚಿಕ್ಕದಾದರೂ ಚುನಾವಣೆ ಹಾಗೂ ರಾಜಕೀಯ ವಿಚಾರದಲ್ಲಿ ರಾಜ್ಯದ ಗಮನ ಸೆಳೆಯುತ್ತಲೇ ಬಂದಿದೆ.
 
ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿರುವ ಕೊರಟಗೆರೆಯಲ್ಲಿ ಪ್ರಸ್ತುತ ಚುನಾವಣಾ ರಾಜಕೀಯ ಬೆಳವಣಿಗೆ ಹೇಗಿದೆ ಎಂಬುದನ್ನು ನೋಡೋಣ. ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರಾನೇರ ಫೈಟ್ ಇದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಹಾಗೂ ಮಾಜಿ ಡಿಸಿಎಂ ಜಿ.ಪರಮೇಶ್ವರ ಹಾಗೂ ಜೆಡಿಎಸ್ ಮಾಜಿ ಶಾಸಕ ಸುಧಾಕರ್ ಲಾಲ್ ನಡುವೆ ಹಣಾಹಣಿ ನಡೆಯಲಿದೆ.

ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ಗೆ ಬಿಜೆಪಿ ಟಿಕೆಟ್ ನೀಡಿದ್ದು, ಜಿ.ಪರಮೇಶ್ವರ ನಿರಾಯಾಸ ಗೆಲುವಿಗೆ ತೊಡಕಾಗಿದೆ.  ಆದರೀಗ ತಮ್ಮದೇ ಸಮುದಾಯದ ಪ್ರಬಲ ವ್ಯಕ್ತಿ ಸ್ಪರ್ಧೆಗೆ ಇಳಿದಿರುವುದರಿಂದ ಎಡಗೈ ಸಮುದಾಯದ ಬಹುಪಾಲು ಮತಗಳು ಬಿಜೆಪಿ ಅಭ್ಯರ್ಥಿ ಕಡೆಗೆ ವಾಲಿ ಪರಮೇಶ್ವರಗೆ ಹಿನ್ನಡೆ ಆಗಬಹುದು. ಇದರ ಲಾಭ ಜೆಡಿಎಸ್ಗೆ ಆಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಅಷ್ಟೊಂದು ಪ್ರಚಾರದಲ್ಲಿ ತೊಡಗಿಲ್ಲ. ಜಿ.ಪರಮೇಶ್ವರ ಅವರು ಕಾಲಿಗೆ ಚಕ್ರಕಟ್ಟಿಕೊಂಡು ಮತದಾರರನ್ನು ತಲುಪುತ್ತಿದ್ದಾರೆ. ಜೆಡಿಎಸ್ ಇದೇ ರೀತಿ ಕ್ಷೀಣವಾಗಿದ್ದರೆ ಕಾಂಗ್ರೆಸ್ಗೆ ಗೆಲುವಿನ ಹಾದಿ ಸುಗಮವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments