ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಪಟ್ಟ ನಿರ್ಧರಿಸುವವರು ರಾಹುಲ್ ಗಾಂಧಿ ಅಲ್ಲ, ಇವರೇ

Krishnaveni K
ಶನಿವಾರ, 29 ನವೆಂಬರ್ 2025 (08:42 IST)
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಹೊಂದಾಣಿಕೆ ಫೈಟ್ ನಡೆಯುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಸಿಎಂ ಆಗಿ ಯಾರು ಮುಂದುವರಿಯಬೇಕು ಎಂದು ತಿರ್ಮಾನಿಸುವವರು ರಾಹುಲ್ ಗಾಂಧಿ ಅಲ್ಲ, ಹಾಗಿದ್ದರೆ ಅವರು ಯಾರು ನೋಡಿ.

ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದ ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ ಎಂದಿದ್ದರು. ಆಗ ರಾಹುಲ್ ಗಾಂಧಿ ಕೈಯಲ್ಲಿ ಎಲ್ಲಾ ತೀರ್ಮಾನವಿದೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಕೇವಲ ರಾಹುಲ್ ಗಾಂಧಿ ಅಲ್ಲ, ಮತ್ತೊಬ್ಬ ನಾಯಕರು ಇದನ್ನು ತೀರ್ಮಾನಿಸಲಿದ್ದಾರೆ.

ರಾಜ್ಯದ ಸಿಎಂ ಕುರ್ಚಿ ಕದನದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವವರು ಸೋನಿಯಾ ಗಾಂಧಿ ಎನ್ನಲಾಗಿದೆ. ಸೋನಿಯಾ ಗಾಂಧಿ ವಿದೇಶ ಪ್ರವಾಸದಲ್ಲಿದ್ದರು. ಈಗಷ್ಟೇ ಅವರು ದೇಶಕ್ಕೆ ವಾಪಸ್ ಆಗಿದ್ದಾರೆ. ಹೀಗಾಗಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಅದಕ್ಕಾಗಿಯೇ ಹೈಕಮಾಂಡ್ ತೀರ್ಮಾನ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಮತ್ತು ಮೊನ್ನೆ ಎರಡೂ ದಿನ ಹೈಕಮಾಂಡ್ ನಾಯಕರ ಸಭೆ ನಡೆದಿದ್ದರೂ ರಾಜ್ಯದ ಕುರ್ಚಿ ಕದನ ಇನ್ನೂ ತೀರ್ಮಾನವಾಗಿಲ್ಲ. ಇದಕ್ಕೆ ಸೋನಿಯಾ ದೇಶದಲ್ಲಿ ಇಲ್ಲದೇ ಇರುವುದು ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಅವರು ಈ ವಿಚಾರದಲ್ಲಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದೇ ಅಂತಿಮವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು, ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಸ್ಟಾಲಿನ್‌ ಕರೆ

ನಾಳೆ ಬಸ್‌ಗಳನ್ನು ರಸ್ತೆಗೆ ಇಳಿಸಲಿರಲು ನಿರ್ಧರಿಸಿದ್ದ ಸಾರಿಗೆ ನೌಕರರಿಗೆ ಬಿಗ್‌ಶಾಕ್‌ ನೀಡಿದ ಹೈಕೋರ್ಟ್

ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಮಾಡ್ತಿದೆ ಕಾಂಗ್ರೆಸ್: ವಿಜಯೇಂದ್ರ

ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ: ಕಂಜನ್ ದಾಳಿಗೆ ಸಿಲುಕಿ ಮಾರ್ತಾಂಡ ಆನೆ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments