Webdunia - Bharat's app for daily news and videos

Install App

ಚನ್ನಪಟ್ಟಣದಲ್ಲಿ ಯಾರು ಗೆಲ್ತಾರೆ: ಬೆಟ್ಟಿಂಗ್ ಶುರು

Krishnaveni K
ಮಂಗಳವಾರ, 19 ನವೆಂಬರ್ 2024 (09:38 IST)
ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆ ಪೈಕಿ ಚನ್ನಪಟ್ಟಣದ ಫಲಿತಾಂಶದ ಮೇಲೆ ಇಡೀ ರಾಜ್ಯದ ಜನರು ಕುತೂಹಲದ ಕಣ್ಣಿಟ್ಟಿದ್ದಾರೆ. ಇದೀಗ ಇಲ್ಲಿ ಯಾರು ಗೆಲ್ಲುತ್ತಾರೆ ಎಂಬ ವಿಚಾರಕ್ಕೆ ಬೆಟ್ಟಿಂಗ್ ಶುರುವಾಗಿದೆ.

ಚನ್ನಪಟ್ಟಣದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಿಂದ ಬಿಜೆಪಿ ತೊರೆದು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸೇರಿದ್ದ ಸಿಪಿ ಯೋಗೇಶ್ವರ್ ಕಣಕ್ಕಿಳಿದಿದ್ದರು. ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿ ನಿಂತಿದ್ದ ಸಿಪಿ ಯೋಗೇಶ್ವರ್ ಗೆ ಅವರ ಪಕ್ಷದವರ ಹೇಳಿಕೆಗಳೇ ಮುಳ್ಳಾಗುವ ಲಕ್ಷಣಗಳು ಕಾಣುತ್ತಿವೆ.

ಇತ್ತೀಚೆಗೆ ಜಮೀರ್ ಅಹ್ಮದ್ ಕರಿಯಾ ಎಂದು ಕುಮಾರಸ್ವಾಮಿಯನ್ನು ಕರೆದಿದ್ದು, ಒಕ್ಕಲಿಗರ ಮತಕ್ಕೆ ಕುತ್ತು ತರುವ ಲಕ್ಷಣವಿದೆ. ಹೀಗಾಗಿ ಸಿಪಿ ಯೋಗೇಶ್ವರ್ ಗೆ ಸೋಲಿನ ಭಯ ಶುರುವಾಗಿದೆ. ಇತ್ತ ನಿಖಿಲ್ ಕುಮಾರಸ್ವಾಮಿ ಈಗಾಗಲೇ ಎರಡು ಚುನಾವಣೆ ಸೋತು ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಹೀಗಾಗಿ ಅವರಿಗೂ ಇದು ಮಹತ್ವದ ಚುನಾವಣೆ.

ಈ ನಿಟ್ಟಿನಲ್ಲಿ ಈ ಚುನಾವಣೆ ಫಲಿತಾಂಶದ ಮೇಲೆ ಎಲ್ಲರ ಕುತೂಹಲವಿದೆ. ಇದೀಗ ಚನ್ನಪಟ್ಟಣ ಫಲಿತಾಂಶದ ಬಗ್ಗೆ ಬೆಟ್ಟಿಂಗ್ ಕೂಡಾ ಶುರುವಾಗಿದೆ ಎಂಬ ಮಾಹಿತಿಯಿದೆ. ನಿಖಿಲ್ ಪರವಾಗಿ ಹೆಚ್ಚು ಜನ ಬೆಟ್ಟಿಂಗ್ ನಡೆಸುತ್ತಿದ್ದಾರೆ. ಬೆಟ್ಟಿಂಗ್ ಮಾಡುವವರಿಗೆ ಈ ಬಾರಿ ಅವರೇ ಫೇವರಿಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments