Select Your Language

Notifications

webdunia
webdunia
webdunia
webdunia

ನನ್ನ ಕ್ಷೇತ್ರಕ್ಕೆ ಯಾರೇ ಕೈ ಹಾಕಿದರೂ ಕೈ ಕತ್ತರಿಸುತ್ತೇನೆ- ಸುಧಾಕರ್ ಗೆ ಎಚ್ಚರಿಕೆ ನೀಡಿದ ಕೈ ಶಾಸಕ

ನನ್ನ ಕ್ಷೇತ್ರಕ್ಕೆ ಯಾರೇ ಕೈ ಹಾಕಿದರೂ ಕೈ ಕತ್ತರಿಸುತ್ತೇನೆ- ಸುಧಾಕರ್ ಗೆ ಎಚ್ಚರಿಕೆ ನೀಡಿದ ಕೈ ಶಾಸಕ
ಚಿಕ್ಕಬಳ್ಳಾಪುರ , ಭಾನುವಾರ, 20 ಅಕ್ಟೋಬರ್ 2019 (11:22 IST)
ಚಿಕ್ಕಬಳ್ಳಾಪುರ : ಮಂಚೇನಹಳ್ಳಿ ನೂತನ ತಾಲೂಕು ಪ್ರಸ್ತಾವನೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಕ್ಷೇತ್ರಕ್ಕೆ ಯಾರೇ ಕೈ ಹಾಕಿದರೂ ಕೈ ಕತ್ತರಿಸುತ್ತೇನೆ ಎಂದು ಗೌರಿಬಿದನೂರು ಕೈ ಶಾಸಕ ಶಿವಶಂಕರ ರೆಡ್ಡಿ ಹೇಳಿದ್ದಾರೆ.



ಗೌರಿಬಿದನೂರು ಕ್ಷೇತ್ರದ ಹಳ್ಳಿಗಳನ್ನು ಸೇರಿಸಿ ಮಂಚೇನಹಳ್ಳಿ ತಾಲೂಕು ಮಾಡುವುದಾಗಿ ಸುಧಾಕರ್ ಅವರು ಪ್ರಚಾರ ಮಾಡುತ್ತಿದ್ದಾರೆ. ಈ ಪ್ರಸ್ತವನೆ ಹಿಂದೆ ಸುಧಾಕರ್ ರಾಜಕೀಯ ಕುತಂತ್ರವಿದೆ. ಅಲ್ಲದೇ ಇದಕ್ಕೆ ನಮ್ಮವರೇ ಕುಮ್ಮಕ್ಕು ನೀಡಿ ಮಂಚೇನಹಳ್ಳಿಗೆ ಸೇರಿಸೋಕೆ ಸುಧಾಕರ್ ಜೊತೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

 

 ಮಂಚೇನಹಳ್ಳಿ ಹೊಸ ತಾಲೂಕು ಬೇಕಿದ್ರೆ ಮಾಡಿಕೊಳ್ಳಲಿ. ಆದ್ರೆ ಗೌರಿಬಿದನೂರು ಕ್ಷೇತ್ರದ ವ್ಯಾಪ್ತಿಗೆ ಅವ್ರು ಬರಬಾರದು. ಒಂದು ವೇಳೆ ಬಂದರೆ ಕೈ ಕತ್ತರಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಕೆ ಸುಧಾಕರ್ ಗೆ ಎಚ್ಚರಿಕೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

'ಅವರನ್ನು ಕ್ಷಮಿಸಿ ಬಿಡು ತಂದೆಯೇ' ಎಂದು ಸಿದ್ದರಾಮಯ್ಯ ಹೇಳಿದ್ದು ಯಾರಿಗೆ?