Select Your Language

Notifications

webdunia
webdunia
webdunia
webdunia

ಯಾರೇ ಬಂದ್ರೂ ನಮ್ದೇ ಗೆಲುವು: ಅಮಿತ್ ಶಾಗೆ ಸಿಎಂ ಟಾಂಗ್

ಯಾರೇ ಬಂದ್ರೂ ನಮ್ದೇ ಗೆಲುವು: ಅಮಿತ್ ಶಾಗೆ ಸಿಎಂ ಟಾಂಗ್
ರಾಯಚೂರು , ಶನಿವಾರ, 12 ಆಗಸ್ಟ್ 2017 (14:09 IST)
ಯಾರೇ ಬಂದ್ರೂ ನಮ್ದೇ ಗೆಲುವು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಟಾಂಗ್ ನೀಡಿದ್ದಾರೆ.
ರಾಯಚೂರಿನಲ್ಲಿ ಆಯೋಜಿಸಲಾದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಎಲ್ಲಾ ಮುಖಂಡರು ಬಂದು ಹೋಗುತ್ತಾರೆ. ಆದರೆ, ನಾವೇ ಅಧಿಕಾರದಲ್ಲಿ ಮುಂದುವರಿಯುತ್ತೇವೆ ಎಂದರು.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಸಾ ರಾಜ್ಯಕ್ಕೆ ಆಗಮಿಸಿದ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿ ಬರಲಿ, ಅಮಿತ್ ಶಾ ಬರಲಿ ಯಾರೇ ಬರಲಿ ಗೆಲುವು ಮಾತ್ರ ನಮ್ಮದೆ ಎಂದು ಘೋಷಿಸಿದರು.
 
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದ ಪ್ರಾಮಾಣಿಕ ಸರಕಾರವಾಗಿದೆ.ರೈತರ ಸಂಕಷ್ಟಗಳಿಗೆ ಸ್ಪಂದಿಸಿದೆ. ಜನತೆಗೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದರು.
 
ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇತರ ರಾಜ್ಯಗಳಲ್ಲಿ ರಾಜಕೀಯ ಸಂಚು ರೂಪಿಸಿದಂತೆ ನಮ್ಮ ರಾಜ್ಯದಲ್ಲಿ ಸಂಚು ರೂಪಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ: ಸಚಿವ ಡಿ.ಕೆ.ಶಿವಕುಮಾರ್