Webdunia - Bharat's app for daily news and videos

Install App

ಎಸ್ಎಂ ಕೃಷ್ಣ ಅಂತ್ಯಕ್ರಿಯೆಗೆ ಶ್ರೀಗಂಧದ ತುಡುಗಳ ಬಳಕೆ ಯಾಕೆ

Krishnaveni K
ಬುಧವಾರ, 11 ಡಿಸೆಂಬರ್ 2024 (10:44 IST)
ಬೆಂಗಳೂರು: ಮೊನ್ನೆ ತಡರಾತ್ರಿ ಅಗಲಿದ್ದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅಂತಿಮ ಯಾತ್ರೆ ಆರಂಭವಾಗಿದ್ದು, ಇಂದು ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರ ಚಿತೆಗೆ ಶ್ರೀಗಂಧದ ಕಟ್ಟಿಗೆಗಳನ್ನೇ ಬಳಸಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ.

ಈಗಾಗಲೇ ಬೆಂಗಳೂರಿನ ನಿವಾಸದಿಂದ ತೆರೆದ ವಾಹನದಲ್ಲಿ ಎಸ್ಎಂ ಕೃಷ್ಣ ಅಂತಿಮ ಯಾತ್ರೆ ಆರಂಭವಾಗಿದೆ. ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಹುಟ್ಟೂರಿನಲ್ಲೇ ಸಕಲ ಸರ್ಕಾರೀ ಗೌರವಗಳೊಂದಿಗೆ ಎಸ್ಎಂ ಕೃಷ್ಣಗೆ ಅಂತಿಮ ಕ್ರಿಯೆ ನೆರವೇರಿಸಲಾಗುತ್ತದೆ.

ಈ ವೇಳೆ ಅವರ ಚಿತೆಗೆ 1000 ಕೆ.ಜಿ.ಗಳಷ್ಟು ಶ್ರೀಗಂಧದ ತುಂಡುಗಳನ್ನು ಬಳಕೆ ಮಾಡಲಾಗುತ್ತದೆ ಎಂದು ಶಾಸಕ ರವಿ ಗಣಿಗ ಹೇಳಿದ್ದಾರೆ. ಇದಕ್ಕೆ ಕಾರಣವೂ ಇದೆ. ಈ ಹಿಂದೆ ಕರ್ನಾಟಕದಲ್ಲಿ ಶ್ರೀಗಂಧ ಬೆಳೆಯಲು ಇದ್ದ ನಿರ್ಬಂಧಗಳನ್ನು ತೆಗೆದು ಹಾಕಿದ್ದು ಎಸ್ಎಂ ಕೃಷ್ಣ ಅವರು. ಇದರಿಂದ ರೈತರಿಗೆ ಅನುಕೂಲವಾಗಿತ್ತು.

ಅದೇ ಕಾರಣಕ್ಕೆ ಎಸ್ಎಂ ಕೃಷ್ಣಗೆ ಇಂದು ಶ್ರೀಗಂಧದ ತುಂಡುಗಳಿಂದಲೇ ಚಿತೆ ಏರ್ಪಡಿಸಲಾಗುತ್ತಿದೆ. ಈ ಮೂಲಕ ಗೌರವ ಸಮರ್ಪಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಸಂಜೆ 3 ಗಂಟೆ ನಂತರ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಕ್ರಿಯೆ ನಡೆಯಲಿದೆ. ರಾಜಕೀಯ ಗಣ್ಯರು, ಅಭಿಮಾನಿಗಳು, ಸ್ವಾಮೀಜಿಗಳು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments