Webdunia - Bharat's app for daily news and videos

Install App

ಕರ್ನಾಟಕದಲ್ಲಿ ಮಾತ್ರ ಯಾಕೆ ಎಸಿಬಿ ರದ್ದು ಮಾಡಿದ್ರು..? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Webdunia
ಮಂಗಳವಾರ, 21 ಫೆಬ್ರವರಿ 2023 (19:28 IST)
ಎಸಿಬಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದ ಒಟ್ಟು 16 ರಾಜ್ಯಗಳಲ್ಲಿ ಇದೆ. ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರ ಕಸಿಯಲಾಗಿದೆ ಎಂದು ಹೇಳುವುದು ಸರಿಯಲ್ಲ.ಅಡ್ವಕೇಟ್ ಜನರಲ್ ಅವರು ಎಸಿಬಿ ರಚನೆ ಸರಿ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ, ಇದಕ್ಕೆ ವಿರುದ್ಧವಾಗಿ ಸರಕಾರ ಹೇಳಿಕೆ ನೀಡುತ್ತಿದ್ದು, ಕೋರ್ಟ್‌ ನಲ್ಲಿ ಒಂದು ಹೊರಗಡೆ ಒಂದು ಭಿನ್ನ ನಿಲುವು ಯಾಕೆ..ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ಕುರಿತಾಗಿ ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳಿಂದ ರಕ್ಷಣೆ ಪಡೆಯಲು ಉದ್ದೇಶಪೂರ್ವಕವಾಗಿ ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರವನ್ನು ಕಿತ್ತುಕೊಂಡರು ಎಂದು ಜನರಿಗೆ ತಪ್ಪು ಮಾಹಿತಿ ನೀಡುವುದು ಯಾಕೆ? ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಯಾಕೆ ಇನ್ನು ಎಸಿಬಿಯನ್ನು ರದ್ದು ಮಾಡಿಲ್ಲ, ಎಂದು ಪ್ರಶ್ನಿಸಿದರು. ನನ್ನ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ್ದ ಅನೇಕ ದೂರುಗಳು ಆಧಾರ ರಹಿತವಾದವು ಎಂದು ಲೋಕಾಯುಕ್ತದವರೇ ರದ್ದು ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments