Select Your Language

Notifications

webdunia
webdunia
webdunia
webdunia

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಜನರು ಕಿಡಿಕಾರಿದ್ದೇಕೆ?

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಜನರು ಕಿಡಿಕಾರಿದ್ದೇಕೆ?
ಚಾಮರಾಜನಗರ , ಸೋಮವಾರ, 12 ಆಗಸ್ಟ್ 2019 (11:26 IST)
ಚಾಮರಾಜನಗರ : ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಅಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಜಿಲ್ಲೆಯ ಬಹುತೇಕ ಗ್ರಾಮಗಳು ಪ್ರವಾಹ ಎದುರಿಸುತ್ತಿವೆ. ಆದರೆ ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮಾತ್ರ ಈವರೆಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಜನರ ಸಂಕಷ್ಟ ಆಲಿಸಲಿಲ್ಲ. ಹೀಗಾಗಿ ಸಿಟ್ಟಿಗೆದ್ದ ಜನರು ಸಾಮಾಜಿಕ  ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.


ಸ್ವಾಭಿಮಾನಿ ಸಂಸದರೇ, ಎಲ್ಲಿದ್ದೀರಾ? ಯಾರಾದರೂ ಸಂಸದರನ್ನ ಹುಡುಕಿ ಕೊಡಿ ಮತಗಳನ್ನು ಪಡೆದು ಜನರ ಕಷ್ಟ ಕಾಲದಲ್ಲಿ ಕಾಣೆಯಾಗಿದ್ದಾರೆ. ಸಂಸದರನ್ನು ಹುಡುಕಿಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎಂದು ಬರೆದು ತಮ್ಮ ಜಲಾವೃತಗೊಂಡ ಗ್ರಾಮಗಳ ಕೆಲ ಫೋಟೋಗಳನ್ನು ಹಾಕಿ ಅಪ್ಲೋಡ್ ಮಾಡಿ ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡಿಸ್ಕವರಿ ಚಾನೆಲ್ ನಲ್ಲಿ ಇಂದು ಪ್ರಧಾನಿ ಮೋದಿ ಕಾರ್ಯಕ್ರಮ