Webdunia - Bharat's app for daily news and videos

Install App

ಅಗ್ನಿ ಶಾಮಕ ಸಿಬ್ಬಂದಿ ವಿರುದ್ಧ ಅಲ್ಲಿನ ಜನರಿಗೆ ಕೋಪ ಏಕೆ?

Webdunia
ಬುಧವಾರ, 27 ಫೆಬ್ರವರಿ 2019 (18:10 IST)
ಅಗ್ನಿ ಶಾಮಕ ದಳ ಎಂದರೆ ತುರ್ತು ಪರಿಸ್ಥಿತಿಯಲ್ಲಿ ಬೆಂಕಿ ನಂದಿಸುವ ಸಿಬ್ಬಂದಿ ಎನ್ನುವುದೇನೋ ಸರಿ. ಆದರೆ ಬೆಂಕಿ ಹತ್ತಿದಾಗಲೂ ಅದನ್ನು ಆರಿಸಿದ ಗೋಜಿಗೆ ಅಲ್ಲಿನ ಸಿಬ್ಬಂದಿ ಹೋಗಿಲ್ಲ. ಹೀಗಾಗಿ ಅಗ್ನಿ ಶಾಮಕ ದಳ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಾಮಾಜಿಕ ಅರಣ್ಯಕ್ಕೆ ಬೆಂಕಿ ಬಿದ್ದಿದೆ. ಅರಣ್ಯದ ಎದುರಲ್ಲೇ ಅಗ್ನಿಶಾಮಕ ಠಾಣೆ ಇದ್ದರೂ ಬೆಂಕಿ ನಂದಿಸದ ಅಧಿಕಾರಿಗಳ ವಿರುದ್ಧ ಜನರು ಗರಂ ಆಗಿದ್ದಾರೆ.

ಸುಮಾರು 20 ಎಕರೆ ಅತ್ಯಮೂಲ್ಯ ಸಸ್ಯ ವರ್ಗ ನಾಶವಾಗಿದೆ. ಹೊಂಗೆ, ಬೇವು, ಬೀಟೆ, ನೆಲ್ಲಿ ಮರಗಳು ಬೆಂಕಿಗಾಹುತಿಯಾಗಿದೆ.
ಬೆಂಕಿಯಿದಾಗಿ ಮೊಲ, ನರಿ, ನವಿಲುಗಳು ವಲಸೆ ಹೋಗಿವೆ. ಬೆಂಕಿ ಹೊತ್ತಿ ಉರಿಯುತ್ತಿದ್ದರೂ ನೋಡಿಯೂ ಸುಮ್ಮನಾದ ಅಗ್ನಿಶಾಮಕ ಸಿಬ್ಬಂದಿ ಕ್ರಮಕ್ಕೆ ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೆಚ್ಚಾಗಿದೆ. ಚಿಕ್ಕಮಗಳೂರು ನಗರದ ಹೊರ ವಲಯದಲ್ಲಿರುವ ಸಾಮಾಜಿಕ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments