Webdunia - Bharat's app for daily news and videos

Install App

ಬ್ರಿಗೇಡ್‌ಗೆ ವಿರೋಧವೇಕೆಂದು ಯಡಿಯೂರಪ್ಪ ಸ್ಪಷ್ಟಪಡಿಸಲಿ: ಈಶ್ವರಪ್ಪ ಸವಾಲ್

Webdunia
ಬುಧವಾರ, 25 ಜನವರಿ 2017 (12:00 IST)
ರಾಯಣ್ಣ ಬ್ರಿಗೇಡ್‌ನಿಂದ ಹಿಂದುಳಿದ ವರ್ಗದವರು ಹಾಗೂ ದಲಿತರು ಜಾಗೃತಿಯಾಗುತ್ತಿದ್ದು, ಇದರಿಂದ ಕಾಂಗ್ರೆಸ್‌ನವರಿಗೆ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಸಹಿಸಲಾಗುತ್ತಿಲ್ಲ. ಬ್ರಿಗೇಡ್‌ಗೆ ವಿರೋಧ ಏಕೆ ಎಂದು ಬಿಎಸ್‌ವೈ ಸ್ಪಷ್ಟಪಡಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಗೇಡ್‌ಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇವಲ 28 ಜನರು ತಮ್ಮ ವಿರುದ್ಧ ಸಹಿಸಂಗ್ರಹ ಮಾಡಿದ್ದು, ಶಿಸ್ತಿನ ಪಕ್ಷವಾಗಿರುವ ಬಿಜೆಪಿಯಲ್ಲಿ ಇಂತಹ ವ್ಯವಸ್ಥೆಯೇ ಇಲ್ಲ. ಸಹಿ ಸಂಗ್ರಹಕ್ಕೆ ಬೆಲೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಮುರಳೀಧರರಾವ್ ಸ್ಪಷ್ಟಪಡಿಸಿದ್ದಾರೆ ಎಂದರು. 
 
 
ಕೂಡಲ ಸಂಗಮದಲ್ಲಿ ರಾಯಣ್ಣ ಬ್ರಿಗೇಡ್ ಸಮಾವೇಶ ನಡೆಯುತ್ತೆ. ಈ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಬಲಿದಾನ ದಿನವನ್ನು ಆಚರಿಸಲಾಗುತ್ತದೆ. ರಾಯಣ್ಣನ ಬಲಿದಾನ ಸಮಾವೇಶಕ್ಕೆ ಯಾರನ್ನು ಆಹ್ವಾನಿಸಿಲ್ಲ. ಯಾರು ಬೇಕಾದರೂ ಸಮಾವೇಶದಲ್ಲಿ ಪಾಲ್ಗೊಳ್ಳಬಹುದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments