Webdunia - Bharat's app for daily news and videos

Install App

ಆತ್ಮಹತ್ಯೆ ಮಾಡಿಕೊಂಡ ರೈತ: ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ ಯಾಕೆ ಗೊತ್ತಾ?

Webdunia
ಶನಿವಾರ, 15 ಸೆಪ್ಟಂಬರ್ 2018 (14:08 IST)
ಸಾಲ ಮರುಪಾವತಿ ಮಾಡಬೇಕೆಂದು ಬ್ಯಾಂಕ್ ರೈತನಿಗೆ ನೋಟೀಸ್ ‌ನೀಡಿತ್ತು. ನೋಟೀಸ್ ನೋಡಿ ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ ಆಗಿದ್ದಾರೆ.

ಬ್ಯಾಂಕ್ ನೋಟೀಸ್ ಗೆ ಮನನೊಂದ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕವಲಗಿ ಗ್ರಾಮದಲ್ಲಿ ನಡೆದಿದೆ.

ಆನಂದ ಭೀಮಪ್ಪ‌ ಠಕ್ಕಳಕಿ 45 ಆತ್ಮಹತ್ಯೆ ಮಾಡಿಕೊಂಡಿದ್ದ ರೈತನಾಗಿದ್ದಾನೆ.
ನೋಟೀಸ್ ನೀಡಿದ್ದ  ಬಸವನವಾಗೇವಾಡಿ ತಾಲೂಕಿನ ತೆಲಗಿ ಗ್ರಾಮದ ಕೆನೆರಾ ಬ್ಯಾಂಕ್  ಮ್ಯಾನೇಜರ್ ರಾಹುಲ್ ಪೋಳ ಬಂಧನವಾಗಿದೆ.

ರೈತ ಆನಂದ ಠಕ್ಕಳಕಿಗೆ ಸಾಲ ಮರುಪಾವತಿಗೆ ನೊಟೀಸ್‌ ನೀಡಿದ್ದ ಕಾರಣ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ ಆಗಿದ್ದಾರೆ. ಕೊಲ್ಹಾರ ಠಾಣೆ ಪೊಲೀಸರಿಂದ ಬ್ಯಾಂಕ್ ಮ್ಯಾನೇಜರ್ ರಾಹುಲ್ ಬಂಧನವಾಗಿದ್ದು, ಪೊಲೀಸ್ ಠಾಣೆಯಲ್ಲಿ ರಾಹುಲ್ ವಿಚಾರಣೆ ನಡೆಯುತ್ತಿದೆ.

ಸಾಲ ಮರು ಪಾವತಿ ನೋಟೀಸ್ ನೀಡಿದ್ದ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ಕೆನೆರಾ ಬ್ಯಾಂಕ್ ತೆಲಗಿ ಶಾಖೆಯಿಂದ  ಸಾಲ ಮರು ಪಾವತಿಯ ನೋಟೀಸ್ ನೀಡಿದ್ದ ಕಾರಣ ಆನಂದ ನೇಣಿಗೆ ಶರಣಾಗಿದ್ದ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments