ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂ ಉಪಜಾತಿ ಸೇರಿಸಿದ್ದಕ್ಕೆ ಬಿಜೆಪಿ ವಿರೋಧಿಸುತ್ತಿರುವುದು ಯಾಕೆ

Krishnaveni K
ಮಂಗಳವಾರ, 16 ಸೆಪ್ಟಂಬರ್ 2025 (09:23 IST)
ಬೆಂಗಳೂರು: ಕರ್ನಾಟಕದಲ್ಲಿ ಧರ್ಮ, ಶೈಕ್ಷಣಿಕ, ಸಾಮಾಜಿಕ ಹಿನ್ನಲೆಯಲ್ಲಿ ಜಾತಿ ಗಣತಿ ಮಾಡಲು ಹೊರಟಿರುವ ರಾಜ್ಯ ಸರ್ಕಾರ ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂಗಳ ಉಪಜಾತಿ ಸೇರಿಸಿರುವುದು ಬಿಜೆಪಿ ಮತ್ತು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಷ್ಟಕ್ಕೂ ಇದಕ್ಕೆ ಬಿಜೆಪಿ ವಿರೋಧಿಸುತ್ತಿರುವುದು ಯಾಕೆ?

ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ, ಉಪಜಾತಿಗಳಿಲ್ಲ. ಆದರೆ ಈಗ ಕರ್ನಾಟಕ ಸರ್ಕಾರ ನಡೆಸಲುದ್ದೇಶಿಸಿರುವ ಜಾತಿ ಸಮೀಕ್ಷೆ ಕಾಲಂನಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂ ಧರ್ಮದ ಉಪಜಾತಿಗಳಾದ ಕುರುಬ, ದಲಿತ, ಲಿಂಗಾಯತ ಎಂದೆಲ್ಲಾ ಉಪಜಾತಿಗಳನ್ನು ಸೇರಿಸಲಾಗಿದೆ.

ಕುರುಬ ಕ್ರಿಶ್ಚಿಯನ್, ದಲಿತ ಕ್ರಿಶ್ಚಿಯನ್ ಎಂದೆಲ್ಲಾ ಹೊಸದಾಗಿ ಸೇರ್ಪಡೆಗೊಳಿಸಲಾಗಿರುವ ಜಾತಿಗಳು. ಇದಕ್ಕೆ ಬಿಜೆಪಿ ಮತ್ತು ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ಹಿಂದೂಗಳ ಜನ ಸಂಖ್ಯೆ ಕಡಿಮೆಯಾಗಿದೆ ಎಂದು ಫಲಿತಾಂಶ ಬರುವ ಸಾಧ್ಯತೆಯಿದ್ದು, ಇದರಿಂದ ಹಿಂದೂಗಳ ಪ್ರಾಬಲ್ಯ ಕಡಿಮೆಯಾಗುವುದು ಎನ್ನುವುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನೊಂದು ಈಗ ಸೇರಿಸಲಾಗಿರುವ ದಲಿತ, ಕುರುಬ ಜಾತಿ ವರ್ಗದವರಿಗೆ ಮೀಸಲಾತಿಯಿದೆ. ಈಗ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ, ಕುರುಬ ಇತ್ಯಾದಿ ವರ್ಗದ ಜನರು ಮತಾಂತರವಾಗಿದ್ದರೂ ಮೀಸಲಾತಿ ಪಡೆಯಬಹುದು. ಅತ್ತ ಧರ್ಮ ಕ್ರಿಶ್ಚಿಯನ್ ಆದರೆ ಮೀಸಲಾತಿ ಮಾತ್ರ ಹಿಂದೂಗಳ ಉಪಜಾತಿಗೆ ಸೇರುವ ಮೀಸಲಾತಿಯಲ್ಲಿ ಬರಲಿದೆ. ಇದರಿಂದ ಮೀಸಲಾತಿ ಪಡೆಯುವ ಹಿಂದುಳಿದ ವರ್ಗದ ಹಿಂದೂ ಉಪಜಾತಿಯವರಿಗೆ ಅನ್ಯಾಯವಾಗಲಿದೆ ಎನ್ನುವುದು ಬಿಜೆಪಿ ಹಾಗೂ ಹಿಂದೂಗಳ ವಿರೋಧಕ್ಕೆ ಕಾರಣವಾಗಿದೆ. ಆದರೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತಾಂತರಗೊಂಡರೆ ಆ ಧರ್ಮದವರೆಂದೇ ಪರಿಗಣಿಸುತ್ತೇವೆ ಎಂದಿದ್ದಾರೆ. ಆದರೆ ಮೀಸಲಾತಿ ಮುಂದುವರಿಯುತ್ತದೆಯೇ ಅಥವಾ ಆ ಧರ್ಮದ ಆಧಾರದಲ್ಲಿಯೇ ಅವರನ್ನು ಪರಿಗಣಿಸಲಾಗುತ್ತದೆಯೇ ಎಂದು ಮುಂದಿನ ದಿನಗಳಲ್ಲಷ್ಟೇ ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments