Webdunia - Bharat's app for daily news and videos

Install App

ಸಿಎಂ, ಬಿಜೆಪಿಗೆ ಅಭಿನಂದನೆ ಸಲ್ಲಿಸಿದ್ದು ಏಕೆ?

Webdunia
ಬುಧವಾರ, 19 ಡಿಸೆಂಬರ್ 2018 (16:16 IST)
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಚಳಿಗಾಲದ ಅಧಿವೇಶನದಲ್ಲಿ ಸಿಎಂ, ವಿರೋಧ ಪಕ್ಷದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸುವರ್ಣಸೌಧದಲ್ಲಿ ಸದನ ಸುಗಮವಾಗಿ ನಡೆಯಲು ವಿರೋಧ ಪಕ್ಷವಾಗಿರುವ ಬಿಜೆಪಿ ಸಹಕಾರ ನೀಡುತ್ತಿದೆ. ಹೀಗಾಗಿ ವಿಪಕ್ಷವನ್ನು ಅಭಿನಂದಿಸುವುದಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಸಿಎಂ, ಮುಂಗಾರು ಮಳೆ ಕೊರತೆಯಿಂದ ಬರ ಎದುರಿಸುತ್ತಿರುವ ತಾಲ್ಲೂಕುಗಳ ಘೋಷಣೆ, ಈಗಾಗಲೇ ಹಿಂಗಾರು ಮಳೆ ಕೊರತೆಯಿಂದ ಬರಕ್ಕೆ ಒಳಗಾಗಿರುವ ತಾಲ್ಲೂಕುಗಳ ಘೋಷಣೆಯನ್ನು 2ನೇ ಹಂತದಲ್ಲಿ ಮಾಡಲಾಗುತ್ತದೆ. ಬರ ಮೇಲಿನ ಉತ್ತರ ನೀಡುವ ಸಂದರ್ಭದಲ್ಲಿ ಹಲವು ಸದಸ್ಯರು ತಮ್ಮ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದರೂ ಬರ ಘೋಷಣೆಯಾಗಿಲ್ಲ ಎಂಬ ಪ್ರಸ್ತಾಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಬರ ಘೋಷಣೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ನಡೆಯುತ್ತಿದೆ.

ಹಿಂಗಾರು ಮಳೆ ಕೊರತೆಯಿಂದ ಬರ ಎದುರಿಸುತ್ತಿರುವ ತಾಲ್ಲೂಕುಗಳ ಘೋಷಣೆಗೆ ತೀರ್ಮಾನ ಮಾಡಲಾಗಿದೆ ಎಂದರು. ಹಿಂಗಾರು ಮಳೆ ಕೊರತೆಯಿಂದ ಬರ ಎದುರಿಸುತ್ತಿರುವ ತಾಲ್ಲೂಕುಗಳನ್ನು ಸದ್ಯದಲ್ಲೇ ಘೋಷಿಸಲಾಗುವುದು. ಸದಸ್ಯರುಗಳ ಬೇಡಿಕೆಯಂತೆ ಹೊಸ ತಾಲ್ಲೂಕುಗಳ ಸೇರ್ಪಡೆಯೂ ಆಗಲಿದೆ ಎಂದು ಸಿಎಂ ಹೇಳಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments