Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

Krishnaveni K
ಗುರುವಾರ, 17 ಏಪ್ರಿಲ್ 2025 (20:37 IST)
ಬೆಂಗಳೂರು: ಜಾತಿಗಣತಿ ವಿಚಾರದಲ್ಲಿ ಯಾವುದೇ ವಿವಾದ ಮೈಮೇಲೆಳೆದುಕೊಳ್ಳದಂತೆ ಎಚ್ಚರಿಕೆಯ ನಡೆ ಇಡಲು ಸಚಿವ ಸಂಪುಟದಲ್ಲಿ ಇಂದು ತೀರ್ಮಾನ ಮಾಡಲಾಗಿದೆ.

ಇಂದು ಜಾತಿಗಣತಿ ವರದಿ ಜಾರಿಗೆ ತರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕಿತ್ತು. ಆದರೆ ಸಚಿವರ ವಿರೋಧ ಸಿಎಂ ಸಿದ್ದರಾಮಯ್ಯನವರು ಖಚಿತ ನಿರ್ಧಾರಕ್ಕೆ ಬಾರದಂತೆ ತಡೆದಿದೆ ಎನ್ನಲಾಗಿದೆ.

ಜಾತಿಗಣತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರಲ್ಲಿ ವಿರೋಧವಿಲ್ಲ. ಆದರೆ ಈಗ ಸಲ್ಲಿಕೆಯಾಗಿರುವ ವರದಿ ಹಳೆಯದಾಗಿದ್ದು, ಇದರಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಈಗಾಗಲೇ ಸಾಬೀತಾಗಿದೆ. ಹೀಗಾಗಿ ಈ ವರದಿ ಜಾರಿಗೆ ತಂದರೆ ಜನರ ಮತ್ತು ತಮ್ಮ ಸಮುದಾಯದವರ ವಿರೋಧ ಕಟ್ಟಿಕೊಳ್ಳಬೇಕಾದೀತು ಎಂಬ ಭಯ ಸಚಿವರಲ್ಲಿದೆ.

ಈ ಕಾರಣಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಸಿಎಂ ಎಲ್ಲಾ ಸಚಿವರ ಅಭಿಪ್ರಾಯ ಕೇಳಿದಾಗ ಸದ್ಯಕ್ಕೆ ವರದಿ ಜಾರಿ ಬೇಡ ಎಂಬ ಅಭಿಪ್ರಾಯ ಕೇಳಿಬಂದಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆ ವೇಳೆ ಎಲ್ಲರೂ ಮೌಖಿಕ ಅಥವಾ ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಲು ಹೇಳಿದ್ದಾರೆ ಎಂದಿದ್ದಾರೆ. ಹೀಗಾಗಿ ಇಂದೇ ಜಾತಿಗಣತಿ ವರದಿ ಬಗ್ಗೆ ಸರ್ಕಾರ ಇಂದೇ ಮಹತ್ವದ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದಿದ್ದವರಿಗೆ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments