Webdunia - Bharat's app for daily news and videos

Install App

ಅಮಿತ್ ಶಾ ಅನ್ನು ಗಡಿಪಾರು ಮಾಡಬೇಕು ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ಯಾಕೆ..?

Webdunia
ಶನಿವಾರ, 31 ಮಾರ್ಚ್ 2018 (05:40 IST)
ಬೆಂಗಳೂರು : ಅಮಿತ್ ಶಾ ಅವರು ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವುದರಿಂದ  ಅವರನ್ನು ಗಡಿಪಾರು ಮಾಡಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಎಸ್‍ವೈ, ಪ್ರತಾಪ್ ಸಿಂಹ 5 ಲಕ್ಷ ರೂ. ಪರಿಹಾರ ಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹಣ ನೀಡಿರುವ ಕುರಿತು ಮೃತ ಯುವಕ ರಾಜು ಅವರ ತಾಯಿಯೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ಶೀಘ್ರವೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

 

‘ಅಮಿತ್ ಶಾ ರಾಜ್ಯಕ್ಕೆ ಬಂದು ಕ್ರಿಮಿನಲ್ ರೀತಿ ವರ್ತಿಸುತ್ತಿದ್ದಾರೆ. ಅವರು ರಾಜ್ಯಕ್ಕೆ ಬರುವುದವನ್ನು ನಿಲ್ಲಿಸಬೇಕು. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಇಬ್ಬರ ವಿರುದ್ಧವೂ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments