Select Your Language

Notifications

webdunia
webdunia
webdunia
webdunia

ವಿದ್ವತ್ ಜತೆ ಸಂಧಾನಕ್ಕೆ ಹೋದ ಹ್ಯಾರಿಸ್ ಸಪ್ಪೆ ಮುಖ ಹಾಕಿಕೊಂಡು ಬಂದಿದ್ಯಾಕೆ…?

ವಿದ್ವತ್ ಜತೆ ಸಂಧಾನಕ್ಕೆ ಹೋದ ಹ್ಯಾರಿಸ್ ಸಪ್ಪೆ ಮುಖ ಹಾಕಿಕೊಂಡು ಬಂದಿದ್ಯಾಕೆ…?
ಬೆಂಗಳೂರು , ಶುಕ್ರವಾರ, 23 ಫೆಬ್ರವರಿ 2018 (06:19 IST)
ಬೆಂಗಳೂರು : ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಜೊತೆ ಸಂಧಾನಕ್ಕೆಂದು ಶಾಸಕ ಹ್ಯಾರಿಸ್ ಅವರು ಗುರುವಾರ ಆಸ್ಪತ್ರೆಗೆ ಭೇಟಿ  ನೀಡಿ ಸಂಧಾನ ಯಶಸ್ವಿಯಾಗದ ಕಾರಣದಿಂದ ಬರಿಗೈಯಲ್ಲಿ ವಾಪಾಸಾಗಿದ್ದಾರೆ.


ಶಾಸಕ ಹ್ಯಾರಿಸ್ ಅವರು ವಿದ್ವತ್ ತಂದೆ ಲೋಕನಾಥ್ ಅವರ ಜೊತೆ ಮಾತುಕತೆ ನಡೆಸಿ, ‘ಕೋರ್ಟ್ ನಲ್ಲಿ ಅಬ್ಜೆಕ್ಷನ್ ಹಾಕಬೇಡಿ. ನನ್ನ ಮಗನಿಗೆ ಬೇಲ್ ಸಿಗೋದಿಲ್ಲ. ಏನೋ ಮಕ್ಕಳು ಹೊಡೆದಾಡಿಕೊಂಡಿದ್ದಾರೆ, ಬುದ್ದಿ ಹೇಳೋಣ. ಕಳೆದ ಮೂರು ದಿನಗಳಿಂದ ಸತ್ತು ಬದುಕುತ್ತಿದ್ದೇನೆ’ ಎಂದು ಗೋಳಾಡಿದ್ದಾರೆ. ಆದರೆ ಸಂಧಾನಕ್ಕೆ ಮಣಿಯದ ಲೋಕನಾಥ್ ಅವರು ಡಾಕ್ಟರ್ ಕರೆದ್ರು ಎಂತಾ ಎದ್ದು ಹೋದ ಕಾರಣ ಹ್ಯಾರಿಸ್ ಅವರು ಸಪ್ಪೆ ಮೋರೆ ಹಾಕಿಕೊಂಡು ಹೊರಗೆ ನಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮುಖಂಡರಿಂದ ಗೂಂಡಾ ರಾಜ್ಯ– ಆಯನೂರು ಮಂಜುನಾಥ್