Webdunia - Bharat's app for daily news and videos

Install App

ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ರಾಹುಲ್ ಗಾಂಧಿ ಬಳಿ ಕಣ್ಣೀರು ಹಾಕಿದ್ದು ಯಾಕೆ?

Webdunia
ಬುಧವಾರ, 21 ಮಾರ್ಚ್ 2018 (11:07 IST)
ಮಂಗಳೂರು : ದಕ್ಷಿಣ ಕನ್ನಡದ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ  ಅವರು,’ ರಾಜ್ಯದಲ್ಲಿ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ರಾಜ್ಯದ ಬಹುತೇಕ ಎಲ್ಲಾ ಹಿರಿಯ ನಾಯಕರದು ಇದೇ ಸ್ಥಿತಿಯಾಗಿದೆ’ ಎಂದು ತಮ್ಮ ನೋವನ್ನು ರಾಹುಲ್ ಗಾಂಧಿ ಅವರ ಬಳಿ ಹೇಳಿ ಕಣ್ಣೀರು ಹಾಕಿದ್ದು, ಅವರನ್ನು ರಾಹುಲ್ ಗಾಂಧಿ ಅವರು ಸಂತೈಸಿದ್ದಾರೆ ಎಂಬ ಮಾಹಿತಿ  ತಿಳಿದುಬಂದಿದೆ.


ಮಂಗಳವಾರ ರಾತ್ರಿ ರಾಹುಲ್ ಗಾಂಧಿಯವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಜನಾರ್ದನ ಪೂಜಾರಿ  ಅವರು ತಮ್ಮ ಪಕ್ಷದ ಮೇಲಿನ ಅಸಮಾಧಾನವನ್ನು  ರಾಹುಲ್ ಗಾಂಧಿ ಅವರ ಮುಂದೆ ಹೇಳಿಕೊಂಡಿದ್ದಾರೆ.

‘ಮುಖ್ಯಮಂತ್ರಿಗಳ ಈ ವರ್ತನೆ ನೋಡಿದರೆ ಪಕ್ಷಕ್ಕೆ ಮುಂದೆ ಅಪಾಯ ಇದೆ. ಈ ಕಾರಣಕ್ಕೆ ನಾನು ನಿಮ್ಮ ಪ್ರವಾಸದಲ್ಲಿ ಭಾಗಿಯಾಗಿಲ್ಲ. ಈ ಬಾರಿ ರಾಜ್ಯದಲ್ಲಿ ಪಕ್ಷ ಅಧಿಕಾರ ಹಿಡಿಯುವುದು ಕಷ್ಟ ಇದೆ. ಸಿದ್ದರಾಮಯ್ಯ ಈ ಬಾರಿ ನಾವೇ ಗೆಲ್ಲುತ್ತೇವೆ ಎನ್ನುವ ಅತಿಯಾದ ಆತ್ಮವಿಶ್ವಾಸದಲ್ಲಿದ್ದಾರೆ. ನಮಗೆ ಗೌರವ ಕೊಡದಿದ್ದರೂ ಪರವಾಗಿಲ್ಲ, ಪಕ್ಷ ಉಳಿಸಲಿ ಸಾಕು. ಪಕ್ಷ ಉಳಿಯುವಂತೆ ಮಾಡುವುದು ನಿಮ್ಮ ಜವಾಬ್ದಾರಿ ‘ ಎಂದು  ಜನಾರ್ದನ ಪೂಜಾರಿ  ಅವರು ರಾಹುಲ್ ಗಾಂಧಿ ಅವರ ಬಳಿ ಹೇಳಿರುವುದಾಗಿ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments