Select Your Language

Notifications

webdunia
webdunia
webdunia
webdunia

ತಮಗೆ ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಮಹೇಶ್ ಕುಮಟಳ್ಳಿ ಹೇಳಿದ್ದೇನು?

ತಮಗೆ ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಮಹೇಶ್ ಕುಮಟಳ್ಳಿ ಹೇಳಿದ್ದೇನು?
ಬೆಂಗಳೂರು , ಗುರುವಾರ, 6 ಫೆಬ್ರವರಿ 2020 (12:32 IST)
ಬೆಂಗಳೂರು: ಚುನಾವಣೆಯಲ್ಲಿ ಗೆದ್ದ 10 ಶಾಸಕರಿಗೆ ಸಿಎಂ ಯಡಿಯೂರಪ್ಪ ಸಚಿವ ಸ್ಥಾನ ನೀಡಿದ್ದು, ಆದರೆ ಗೆದ್ದ ಮಹೇಶ್ ಕುಮಟಳ್ಳಿಯವರ ಹೆಸರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಈ ಬಗ್ಗೆ ಮಹೇಶ್ ಕುಮಟಳ್ಳಿ ಬೇಸರ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ಮಂತ್ರಿ ಸ್ಥಾನ ನೀಡದಿದ್ದಕ್ಕೆ ಬೇಸರವಾಗಿದೆ. ಆದರೆ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ನನಗೆ ಮಂತ್ರಿ ಸ್ಥಾನ ನೀಡದಿರಲು ಕಾರಣವೇನು ಎಂಬುದು ಸಿಎಂ ಅವರ ಭೇಟಿ ಮಾಡಿದ ನಂತರ ತಿಳಿಯುತ್ತದೆ ಎಂದು ಹೇಳಿದ್ದಾರೆ.


ಮಂತ್ರಿ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸೋ ಕೆಲಸವಾದರೂ ಮಾಡಲು ಸಿದ್ಧನಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೆ ಪರ್ಯಾಯ ಅಧಿಕಾರ ಕೊಡುತ್ತೇನೆ ಎಂದು ಸಿಎಂ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ