Select Your Language

Notifications

webdunia
webdunia
webdunia
webdunia

ಸಚಿವ ಪುಟ್ಟರಂಗ ಶೆಟ್ಟಿ ಬಿಸಿಎಂ ವಸತಿ ಶಾಲೆಯ ಮಕ್ಕಳನ್ನು ಕಂಡು ಬೇಸರಗೊಂಡಿದ್ಯಾಕೆ ?

ಸಚಿವ ಪುಟ್ಟರಂಗ ಶೆಟ್ಟಿ ಬಿಸಿಎಂ ವಸತಿ ಶಾಲೆಯ ಮಕ್ಕಳನ್ನು ಕಂಡು ಬೇಸರಗೊಂಡಿದ್ಯಾಕೆ ?
ತುಮಕೂರು , ಶನಿವಾರ, 6 ಅಕ್ಟೋಬರ್ 2018 (14:19 IST)
ತುಮಕೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಪುಟ್ಟರಂಗ ಶೆಟ್ಟಿ ಹರಿದ ಸಮವಸ್ತ್ರ ಧರಿಸಿದ ಬಿಸಿಎಂ ವಸತಿ ಶಾಲೆಯ ಮಕ್ಕಳನ್ನು ಕಂಡು ತುಂಬಾ ಬೇಸರಗೊಂಡಿದ್ದಾರೆ.


ಶುಕ್ರವಾರ ಸಂಜೆ ಕುಣಿಗಲ್ ಪಟ್ಟಣದಲ್ಲಿರುವ ಬಿಸಿಎಂ ವಸತಿ ಶಾಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ ನೀಡಿ, ಶಾಲೆಯಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯೋರ್ವ ಹರಿದ ಬಟ್ಟೆ ಹಾಕಿರುವುದನ್ನು ನೋಡಿದ ಸಚಿವರು ಬೇಸರದಿಂದ ಮಕ್ಕಳಿಗೆ ಹರಿದ ಬಟ್ಟೆ ಯಾಕೆ ನೀಡಿದ್ದೀರಿ ಅಂತ ಶಾಲಾ ಉಸ್ತುವಾರಿಯನ್ನು ಪ್ರಶ್ನೆ ಮಾಡಿದ್ದಾರೆ.


ಇಲಾಖೆಯಿಂದ ಸಮವಸ್ತ್ರ ಸರಬರಾಜಾಗಿಲ್ಲದ ಕಾರಣ ಹರಿದ ಬಟ್ಟೆ ಹಾಕಿದ್ದಾನೆ ಎಂದು ಅವರು ಹೇಳದಾಗ ಕೂಡಲೇ ಸಮವಸ್ತ್ರ ಖರೀದಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇದೇ ವೇಳೆ ಶಾಲೆಯಲ್ಲಿ ಗ್ರಂಥಾಲಯ ಹಾಗೂ ಕಂಪ್ಯೂಟರ್ ಇಲ್ಲದಿದ್ದಕ್ಕೆ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ