ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಸಿನಿಮಾ ನಟರ ವಿರುದ್ಧ ಶ್ರೀರಾಮಸೇನೆ ಆರೋಪ ಮಾಡಿದಾದರೂ ಯಾಕೆ?

Webdunia
ಗುರುವಾರ, 10 ಮೇ 2018 (14:23 IST)
ಧಾರವಾಡ : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿನಿಮಾ ನಟರಾದ ಸುದೀಪ್, ದರ್ಶನ್, ಯಶ್ ಅವರು ತಮ್ಮ ಆತ್ಮೀಯ ರಾಜಕಾರಣಿಗಳ ಪರವಾಗಿ ಮತಯಾಚಿಸಿದ್ದು, ಈ ಬಗ್ಗೆ ಶ್ರೀರಾಮಸೇನೆ ಸಂಘಟನೆ ‘ಹಣ ಪಡೆದು ಕೆಲವು ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಳಿದಿದ್ದಾರೆ ‘ ಎಂದು ನಟರ ವಿರುದ್ಧ ಆರೋಪ ಮಾಡಿದ್ದಾರೆ.


ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮಸೇನೆ ಸಂಘಟನೆಯ ಸಂಚಾಲಕ ಮಂಜುನಾಥ ಕವಳಿ ಅವರು,’ ನಟರು ರಾಜಕಾರಣಕ್ಕೆ ಬರುವುದರಲ್ಲಿ ನಮ್ಮ ಆಕ್ಷೇಪವೇನೂ ಇಲ್ಲ. ನಟರಾದ ಅಂಬರೀಶ್ ಹಾಗೂ ಜಗ್ಗೇಶ್ ಅವರಂತೆ ಒಂದೇ ಪಕ್ಷದಲ್ಲಿರಲಿ. ಒಂದು ಪಕ್ಷದಲ್ಲಿ ಗುರುತಿಸಿಕೊಂಡು ರಾಜಕಾರಣ ನಡೆಸಲಿ. ಅದನ್ನು ಬಿಟ್ಟು ಬೆಳಿಗ್ಗೆ ಒಂದು ಪಕ್ಷದ ಅಭ್ಯರ್ಥಿ, ಸಂಜೆ ಮತ್ತೊಂದು ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ’ ಎಂದು ಕಿಡಿಕಾರಿದ್ದಾರೆ.
ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಮಂದಿ ಹೋರಾಟಗಾರರು, ಪ್ರಾಮಾಣಿಕ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಅವರ ಪರವಾಗಿ ಈ ನಟರು ಪ್ರಚಾರ ನಡೆಸಲಿ. ಸ್ನೇಹಿತರ ಪರವಾಗಿ ಪ್ರಚಾರ ನಡೆಸುತ್ತೇವೆ ಎಂದು ಹೇಳುತ್ತಾ ಗಂಟೆಗೊಬ್ಬರು ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದಾರೆ. ಹಣ ಪಡೆದು ಕೆಲವು ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments