ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ದೌಡಾಯಿಸಿದ್ದು, ಕುತೂಹಲಕ್ಕೀಡು ಮಾಡಿತ್ತು.
ಆದರೆ ಬಿಎಸ್ವೈ ಹಾಗೂ ಸಿಎಂ ಭೇಟಿ ಹಿಂದೆ ಮೋದಿ ಆಗಮನದ ಚರ್ಚೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 2 ಕ್ಕೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಮೋದಿ ಸಮಾವೇಶದ ಕುರಿತು ಯಡಿಯೂರಪ್ಪರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.